Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...