Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...