Homeಮುಖಪುಟ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

- Advertisement -
- Advertisement -

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ರ‍್ಯಾಲಿಗಳ ಥೀಮ್ ಸಾಂಗ್ “ಖೇಲಾ ಹೋಬೆ” (ಗೇಮ್ ಆನ್-ಆಟ ಶುರು) ಕುರಿತು ಇಂದು ಕೋಲ್ಕತ್ತಾದಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಖೇಲ್ ಖತಂ’ ಎಂದು ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಇಂದು ನಡೆದ ಗ್ಯಾಸ್ ದರ ಏರಿಕೆ ವಿರುದ್ಧದ ಬೃಹತ್ ರ‍್ಯಾಲಿಯಲ್ಲಿ ಮಮತಾ ಬ್ಯಾನರ್ಜಿ, ‘ಉಜ್ವಲಾ-ಜುಮ್ಲಾ’ ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು “ಭ್ರಷ್ಟಾಚಾರ ಮತ್ತು ಲೂಟಿ-ತಂತ್ರ ” ಎಂದು ಟೀಕಿಸಿದ ಪಿಎಂ ಮೋದಿ, “ಏನೂ ಮರೆಮಾಡಲಾಗಿಲ್ಲ. ಬಂಗಾಳಕ್ಕೆ ಎಲ್ಲವೂ ತಿಳಿದಿದೆ. ಆದರೆ ಈ ಖೇಲ್ (ಆಟ) ಮುಂದುವರಿಯುವುದಿಲ್ಲ. ಖೇಲ್ ಖತಮ್ ಹೋನಾ ಚಾಹಿಯೇ (ಈ ಆಟ ನಿಲ್ಲಲೇಬೇಕು) ಎಂದರು.

ಆಗ ಪ್ರಧಾನಿ ಬಂಗಾಳ ಮುಖ್ಯಮಂತ್ರಿಗೆ ನೇರ ಸವಾಲು ಎಸೆದರು. “ದೀದಿ, ಇದನ್ನು ಕೇಳಿ, ಟಿಎಂಸಿಯ ಆಟ ಮುಗಿದಿದೆ. ಆಟ ಮುಗಿಯುತ್ತದೆ, ಅಭಿವೃದ್ಧಿ ಪ್ರಾರಂಭವಾಗುತ್ತದೆ’ ಎಂದರು.
ಇಂದು ನಡೆದ ರ‍್ಯಾಲಿಯಲ್ಲಿ ಬಾಲಿವುಡ್ ಮಾಜಿ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರಿದರು.

“ಖೇಲಾ ಹೋಬೆ” ಎಂಬ ರ‍್ಯಾಪ್ ಹಾಡು ತೃಣಮೂಲದ ಪ್ರಚಾರ ಗೀತೆಯಾಗಿ ಮಾರ್ಪಟ್ಟಿದೆ. ‘ಖೇಲಾ ಹೋಬೆ’ ಎಂಬ ಘೋಷಣೆಯೂ ಟಿಎಂಸಿ ರ‍್ಯಾಲಿಗಳಲ್ಲಿ ಸಾಮಾನ್ಯವಾಗಿದೆ.
ಈ ಹಾಡನ್ನು ತೃಣಮೂಲ ನಾಯಕ ದೇಬಾಂಗ್ಶು ಭಟ್ಟಾಚಾರ್ಯ ರಚಿಸಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರಿಗೆ ಸವಾಲು ಹಾಕುತ್ತಿರುವುದರಿಂದ ಅವರ ಹೆಚ್ಚಿನ ರ‍್ಯಾಲಿಗಳಲ್ಲಿ ‘ಖೇಲಾ ಹೋಬೆ’ ಘೋಷಣೆಯನ್ನು ಬಳಸುತ್ತಿದ್ದಾರೆ.

ಶುಕ್ರವಾರ, ಮಮತಾ ಬ್ಯಾನರ್ಜಿ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲು ನಡೆದ ಪತ್ರಿಕಾಗೋಷ್ಠಿಯಲ್ಲಿ “ಖೇಲಾ ಹೋಬೆ, ದೇಖಾ ಹೋಬೆ, ಜೆಟಾ ಹೋಬೆ … (ಆಟ ಶುರು, ನಾವು ನೋಡುತ್ತೇವೆ, ನಾವು ಗೆಲ್ಲುತ್ತೇವೆ).” ಎಂದು ಹೇಳಿದ್ದರು.

ಇಂದು ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮಮತಾ ನೇತೃತ್ವದಲ್ಲಿ ಸಿಲಿಗುರಿಯಲ್ಲಿ ನಡೆದ ಬೃಹತ್ ಪಾದಯಾತ್ರೆ ಮತ್ತು ಸಭೆಯಲ್ಲಿ ಪಾಲ್ಗೊಂಡ ಮಮತಾ ಬ್ಯಾನರ್ಜಿ, ಚುನಾವಣೆಗೂ ಮೊದಲು ಉಜ್ವಲಾ, ನಂತರ ಎಲ್ಲವು ಜುಮ್ಲಾ’ ಎಂದು ಕೇಂದ್ರದ ಗ್ಯಾಸ್ ಯೋಜನೆ ಉಜ್ವಲಾವನ್ನು ಟೀಕಿಸಿದರು. ಉಚಿತ ಅಕ್ಕಿ ಇದೆ, ಬೇಯಿಸಲು ಗ್ಯಾಸ್ ಇಲ್ಲ ಎಂದು ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...