Homeಮುಖಪುಟನಂದಿಗ್ರಾಮ: ಬಿಜೆಪಿ ಕಾರ್ಯಕರ್ತರಿಂದ ಬೂತ್ ವಶ ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ನಂದಿಗ್ರಾಮ: ಬಿಜೆಪಿ ಕಾರ್ಯಕರ್ತರಿಂದ ಬೂತ್ ವಶ ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಸ್ಪರ್ಧಿಸಿರುವ ನಂದಿಗ್ರಾಮ ಕೇಂದ್ರಬಿಂದುವಾಗಿದೆ. ನಂದಿಗ್ರಾಮದಲ್ಲಿಂದು ಮತದಾನದ ವೇಳೆ ಕಾರ್ಯಕರ್ತರ ಹತ್ಯೆ, ಕಲ್ಲುತೂರಾಟ, ಬೂತ್ ನಿಯಂತ್ರಣ ಆರೋಪಗಳು ಕೇಳಿ ಬರುತ್ತಿವೆ.

ನಂದಿಗ್ರಾಮದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಬೆಳಗ್ಗೆಯಿಂದ ನಡೆಯುತ್ತಿರುವ ಘಟನೆಗಳ ಕುರಿತು ಚುನಾವಣಾ ಆಯೋಗಕ್ಕೆ ಸುಮಾರು 63 ದೂರುಗಳನ್ನು ನೀಡಿದ್ದೇವೆ. ಆದರೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಚುನಾವಣಾ ಆಯೋಗ ಈ ದೂರುಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿರುವುದರ ಕುರಿತು ನಾವು ನ್ಯಾಯಾಲಯಕ್ಕೆ ದೂರು ನೀಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಡೀ ದಿನ ಮಮತಾ ಬ್ಯಾನರ್ಜಿ ನಂದಿಗ್ರಾಮ ಬಿಟ್ಟು ಎಲ್ಲಿಯೂ ಹೋಗಿಲ್ಲ.

ಬಿಜೆಪಿ ಕಾರ್ಯಕರ್ತರು ನಂದಿಗ್ರಾಮ ಬೂತ್‌ಗಳನ್ನು ಸುತ್ತುವರೆದು ಸ್ಥಳೀಯರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧಂಖರ್ ಅವರೊಂದಿಗೆ ನಂದಿಗ್ರಾಮದನ ಮತದಾನ ಕೇಂದ್ರದಿಂದಲೇ ಕರೆ ಮಾಡಿ ದೂರು ನೀಡಿದ್ದಾರೆ.

“ಅವರು ಸ್ಥಳೀಯ ಜನರಿಗೆ ಮತ ಚಲಾಯಿಸಲು ಬಿಡುತ್ತಿಲ್ಲ. ಬೆಳಿಗ್ಗೆಯಿಂದ ನಾನು ದೂರು ನೀಡುತ್ತಿದ್ದೇನೆ. ಈಗ ನಾನು ನಿಮಲ್ಲಿ ಮನವಿ ಮಾಡುತ್ತಿದ್ದೇನೆ, ದಯವಿಟ್ಟು ನೀವು ಇದನ್ನು ನೋಡಿ” ಎಂದಿದ್ದಾರೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಬೂತ್ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತೃಣಮೂಲದ ಡೆರೆಕ್ ಒಬ್ರಿಯೆನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಬಿಜೆಪಿ ಕಾರ್ಯಕರ್ತರ ಬೃಹತ್ ಗುಂಪೊಂದು ಬೂತ್ ಸಂಖ್ಯೆ 6, 7, 49, 27, 162, 21, 26, 13, 262, 256, 163, 20ಕ್ಕೆ  ಪ್ರವೇಶಿಸಿದೆ. ಇವಿಎಂ ನಿಯಂತ್ರಣವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಬಿಜೆಪಿ ಕಾರ್ಯಕರ್ತರು ಮತ್ತು ಬೂತ್ ಅನ್ನು ಸುತ್ತುವರೆದಿದ್ದಾರೆ ಎಂದು ಪತ್ರ ಬರೆದಿದ್ದಾರೆ.

ಇನ್ನು ಸುಮಾರು 150ಕ್ಕೂ ಹೆಚ್ಚು ಇವಿಎಂಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಟಿಎಂಸಿ ಸಂಸದೆ ಮಹುವಾ ಮೊಹಿತ್ರ ಆರೋಪಿಸಿದ್ದರು. ಇದಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಬಹಳಷ್ಟನ್ನು ಸರಿಪಡಿಸಲಾಗಿದೆ ಎಂದಿದೆ.

ಬಿಜೆಪಿ ಅಭ್ಯರ್ಥಿಯ ಕಾರಿಗೆ ಕಲ್ಲು ತೂರಾಟ ನಡೆದ ನಂತರ ನಂದಿಗ್ರಾಮದ ಕೇಶಪುರದಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.

ಬಂಗಾಳದಲ್ಲಿ ಚುನಾವಣೆಗಾಗಿ ಚುನಾವಣಾ ಆಯೋಗ ಬಂಗಾಳದ 10,620 ಬೂತ್‌ಗಳ ಭದ್ರತೆಗಾಗಿ ಕೇಂದ್ರ ಪಡೆಗಳ ಸುಮಾರು 651 ತಂಡಗಳನ್ನು ನಿಯೋಜಿಸಿದೆ. ನಂದಿಗ್ರಾಮದ 355 ಬೂತ್‌ಗಳನ್ನು ಅತಿಸೂಕ್ಷ್ಮ ಮತದಾನದ ಬೂತ್ ಎಂದು ಹೇಳಲಾಗಿದೆ. ಇಲ್ಲಿ ಕೇಂದ್ರ ಭದ್ರತಾ ಪಡೆಗಳ 22 ತಂಡಗಳನ್ನು ನಿಯೋಜಿಸಲಾಗಿದೆ. ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...