Homeಮುಖಪುಟನಂದಿಗ್ರಾಮ: ಬಿಜೆಪಿ ಕಾರ್ಯಕರ್ತರಿಂದ ಬೂತ್ ವಶ ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ನಂದಿಗ್ರಾಮ: ಬಿಜೆಪಿ ಕಾರ್ಯಕರ್ತರಿಂದ ಬೂತ್ ವಶ ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಸ್ಪರ್ಧಿಸಿರುವ ನಂದಿಗ್ರಾಮ ಕೇಂದ್ರಬಿಂದುವಾಗಿದೆ. ನಂದಿಗ್ರಾಮದಲ್ಲಿಂದು ಮತದಾನದ ವೇಳೆ ಕಾರ್ಯಕರ್ತರ ಹತ್ಯೆ, ಕಲ್ಲುತೂರಾಟ, ಬೂತ್ ನಿಯಂತ್ರಣ ಆರೋಪಗಳು ಕೇಳಿ ಬರುತ್ತಿವೆ.

ನಂದಿಗ್ರಾಮದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಬೆಳಗ್ಗೆಯಿಂದ ನಡೆಯುತ್ತಿರುವ ಘಟನೆಗಳ ಕುರಿತು ಚುನಾವಣಾ ಆಯೋಗಕ್ಕೆ ಸುಮಾರು 63 ದೂರುಗಳನ್ನು ನೀಡಿದ್ದೇವೆ. ಆದರೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಚುನಾವಣಾ ಆಯೋಗ ಈ ದೂರುಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿರುವುದರ ಕುರಿತು ನಾವು ನ್ಯಾಯಾಲಯಕ್ಕೆ ದೂರು ನೀಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಡೀ ದಿನ ಮಮತಾ ಬ್ಯಾನರ್ಜಿ ನಂದಿಗ್ರಾಮ ಬಿಟ್ಟು ಎಲ್ಲಿಯೂ ಹೋಗಿಲ್ಲ.

ಬಿಜೆಪಿ ಕಾರ್ಯಕರ್ತರು ನಂದಿಗ್ರಾಮ ಬೂತ್‌ಗಳನ್ನು ಸುತ್ತುವರೆದು ಸ್ಥಳೀಯರಿಗೆ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧಂಖರ್ ಅವರೊಂದಿಗೆ ನಂದಿಗ್ರಾಮದನ ಮತದಾನ ಕೇಂದ್ರದಿಂದಲೇ ಕರೆ ಮಾಡಿ ದೂರು ನೀಡಿದ್ದಾರೆ.

“ಅವರು ಸ್ಥಳೀಯ ಜನರಿಗೆ ಮತ ಚಲಾಯಿಸಲು ಬಿಡುತ್ತಿಲ್ಲ. ಬೆಳಿಗ್ಗೆಯಿಂದ ನಾನು ದೂರು ನೀಡುತ್ತಿದ್ದೇನೆ. ಈಗ ನಾನು ನಿಮಲ್ಲಿ ಮನವಿ ಮಾಡುತ್ತಿದ್ದೇನೆ, ದಯವಿಟ್ಟು ನೀವು ಇದನ್ನು ನೋಡಿ” ಎಂದಿದ್ದಾರೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಬೂತ್ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತೃಣಮೂಲದ ಡೆರೆಕ್ ಒಬ್ರಿಯೆನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. “ಬಿಜೆಪಿ ಕಾರ್ಯಕರ್ತರ ಬೃಹತ್ ಗುಂಪೊಂದು ಬೂತ್ ಸಂಖ್ಯೆ 6, 7, 49, 27, 162, 21, 26, 13, 262, 256, 163, 20ಕ್ಕೆ  ಪ್ರವೇಶಿಸಿದೆ. ಇವಿಎಂ ನಿಯಂತ್ರಣವನ್ನು ತೆಗೆದುಕೊಳ್ಳಲು ಪ್ರಯತ್ನಿಸುವ ಬಿಜೆಪಿ ಕಾರ್ಯಕರ್ತರು ಮತ್ತು ಬೂತ್ ಅನ್ನು ಸುತ್ತುವರೆದಿದ್ದಾರೆ ಎಂದು ಪತ್ರ ಬರೆದಿದ್ದಾರೆ.

ಇನ್ನು ಸುಮಾರು 150ಕ್ಕೂ ಹೆಚ್ಚು ಇವಿಎಂಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಟಿಎಂಸಿ ಸಂಸದೆ ಮಹುವಾ ಮೊಹಿತ್ರ ಆರೋಪಿಸಿದ್ದರು. ಇದಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದ್ದು, ಬಹಳಷ್ಟನ್ನು ಸರಿಪಡಿಸಲಾಗಿದೆ ಎಂದಿದೆ.

ಬಿಜೆಪಿ ಅಭ್ಯರ್ಥಿಯ ಕಾರಿಗೆ ಕಲ್ಲು ತೂರಾಟ ನಡೆದ ನಂತರ ನಂದಿಗ್ರಾಮದ ಕೇಶಪುರದಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ.

ಬಂಗಾಳದಲ್ಲಿ ಚುನಾವಣೆಗಾಗಿ ಚುನಾವಣಾ ಆಯೋಗ ಬಂಗಾಳದ 10,620 ಬೂತ್‌ಗಳ ಭದ್ರತೆಗಾಗಿ ಕೇಂದ್ರ ಪಡೆಗಳ ಸುಮಾರು 651 ತಂಡಗಳನ್ನು ನಿಯೋಜಿಸಿದೆ. ನಂದಿಗ್ರಾಮದ 355 ಬೂತ್‌ಗಳನ್ನು ಅತಿಸೂಕ್ಷ್ಮ ಮತದಾನದ ಬೂತ್ ಎಂದು ಹೇಳಲಾಗಿದೆ. ಇಲ್ಲಿ ಕೇಂದ್ರ ಭದ್ರತಾ ಪಡೆಗಳ 22 ತಂಡಗಳನ್ನು ನಿಯೋಜಿಸಲಾಗಿದೆ. ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...