Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...