Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...