Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...