Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...