Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...