Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...