Homeಮುಖಪುಟ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪದೇ ಪದೇ ಎತ್ತುತ್ತಿರುವ ‘ಹೊರಗಿನವರು’ ಎಂಬ ಪ್ರಶ್ನೆಗೆ ಉತ್ತರ ಎಂಬಂತೆ, ‘ದೀದಿ ಈಗ ಬಂಗಾಳದಲ್ಲಿ ನಿಮ್ಮ ಅಧ್ಯಾಯ ಮುಗಿಯಿತು. ವಾರಣಾಸಿಗೆ ಸ್ವಾಗತ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ವ್ಯಂಗ್ಯ ಮಾಡಿದ್ದಾರೆ.

‘ಹೊರಗಿನವರಿಂದ (ಮೋದಿ-ಶಾ) ಬಂಗಾಳದ ಸಂಸ್ಕೃತಿ ನಾಶವಾಗಲಿದೆ’ ಎಂದು ಟಿಎಂಸಿ ಎಚ್ಚರಿಸುತ್ತ ಬಂದಿತ್ತು. ‘ನಂದಿಗ್ರಾಮದಲ್ಲಿ ಗೆಲುವಿನ ಅಭದ್ರತೆಯಿರುವ ಕಾರಣ ದೀದಿ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವರೆ?’ ಎಂಬ ಮೋದಿಯವರ ಮಾತಿಗೆ ಉತ್ತರಿಸಿದ ಟಿಎಂಸಿ, ‘ದಿದಿ ಮುಂದಿನ ಸಲ ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ’ ಎಂದು ಪ್ರತ್ಯುತ್ತರ ನೀಡಿತ್ತು. (ವಾರಣಾಸಿ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರ)

ಶನಿವಾರ ಉತ್ತರ 24 ಪರಗಣಗಳಲ್ಲಿ ನಡೆದ ರ‍್ಯಾಲಿಯಲ್ಲಿಯೂ ಸಹ, ಮಮತಾ ಬ್ಯಾನರ್ಜಿ, ಅವರ ಪಕ್ಷ ಬಿಜೆಪಿಗೆ ‘ಹೊರಗಿನವರು’ ಎಂದು ಹಣೆಪಟ್ಟಿ ಕಟ್ಟಿರುವ ವಿಷಯದ ಸುತ್ತಲೇ ಮಾತನಾಡಿ, “ಬಿಜೆಪಿ ಬಂಗಾಳವನ್ನು ವಿಭಜಿಸಲು ಬಯಸಿದೆ… ಈ ಜನರು ಬಂಗಾಳ, ಅದರ ಭಾಷೆ, ಸಂಸ್ಕೃತಿಯನ್ನು ಕೊನೆಗೊಳಿಸಲು ಬಯಸುತ್ತಾರೆ” ಎಂದರು. ಗಾಲಿಕುರ್ಚಿಯಲ್ಲಿ ಪ್ಲಾಸ್ಟರ್ ಹಾಕಿದ ಪಾದವನ್ನು ಇಟ್ಟುಕೊಂಡು ಮಾತನ್ನಾಡಿದ ಅವರು, ‘ಎಲ್ಲಾ ಅಲ್ಪಸಂಖ್ಯಾತ ಸಹೋದರ ಸಹೋದರಿಯರೇ ಮತ ವಿಭಜನೆ ಆಗದಂತೆ ನೋಡಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ’ ಎಂದರು.

ಮಮತಾರ ರ‍್ಯಾಲಿ ಸ್ಥಳದಿಂದ 60 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ, “ದೀದಿ ಈಗ ಹೊರಗೆ ಒಂದು ಸ್ಥಳವನ್ನು ಹುಡುಕುತ್ತಿದ್ದಾರೆ. ವಾರಣಾಸಿಗೆ ಸುಸ್ವಾಗತ. ಹಲ್ಡಿಯಾದಿಂದ ವಾರಣಾಸಿಗೆ ಹೋಗುವ ಹಡಗು ಇದೆ. ಇನ್ನೊಂದು ವಿಷಯ, ಜನರು ನನ್ನ ಬನಾರಸ್ (ವಾರಣಾಸಿ) ಜನರು ತುಂಬಾ ದೊಡ್ಡ ಹೃದಯದವರು, ಅವರು ನಿಮ್ಮನ್ನು ಪ್ರವಾಸಿ ಅಥವಾ ಹೊರಗಿನವರು ಎಂದು ಕರೆಯುವುದಿಲ್ಲ. ಅವರು ಬಂಗಾಳದ ಜನರಂತೆ ದೊಡ್ಡ ಹೃದಯದವರು” ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.

“ವಾರಣಾಸಿಯಲ್ಲಿ ಜೈ ಶ್ರೀ ರಾಮ್ ಎಂದು ಹೇಳುವ ತಿಲಕ ಹೊಂದಿರುವ ಬಹಳಷ್ಟು ಜನರನ್ನು ಕಾಣುತ್ತೀರಿ. ದೀದಿ, ಆಗ ನಿಮಗೆ ಏನಾಗುತ್ತದೆ? ನೀವು ಯಾರ ಮೇಲೆ ಕೋಪಗೊಳ್ಳುತ್ತೀರಿ? ಬನಾರಸ್ ಜನರ ಮೇಲೆ ಕೋಪಗೊಳ್ಳಬೇಡಿ. ಅವರು ನಿಮ್ಮೊಂದಿಗೆ ವಾಸಿಸುತ್ತಾರೆ. ಅವರು ನಿಮ್ಮನ್ನು ದೆಹಲಿಗೆ ಹೋಗಲು ಬಿಡುವುದಿಲ್ಲ. ಅವರು ನಿಮ್ಮನ್ನು ಅಲ್ಲಿಯೇ ಇಟ್ಟುಕೊಳ್ಳುತಾರೆ’ ಎಂದು ಪ್ರಧಾನಿ ಹೇಳಿದರು.

2014 ಮತ್ತು 2019 ರಲ್ಲಿ ವಾರಣಾಸಿಯಿಂದ ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಪಿಎಂ ಮೋದಿ ಜಯ ಗಳಿಸಿದ್ದಾರೆ.

ಮೇ 2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ಬಂಗಾಳದ ಪಟ್ಟಣವೊಂದಕ್ಕೆ ಮಮತಾ ಬ್ಯಾನರ್ಜಿ ಹೋದಾಗ ರಸ್ತೆ ಬದಿ ನಿಂತ ನೂರಾರು ಜನರು “ಜೈ ಶ್ರೀ ರಾಮ್” ಎಂಬ ಘೋಷಣೆಗಳನ್ನು ಕೂಗಿದ್ದರು. ಕಾರನ್ನು ನಿಲ್ಲಿಸಲು ಹೇಳಿದ ಮಮತಾ, ಘೋಷಣೆ ಕೂಗುವವರು ತಮ್ಮ ಜೊತೆ ಮಾತುಕತೆಗೆ ಬರಲಿ ಎಂದು ಆಹ್ವಾನ ನೀಡಿದ್ದರು. ಆಗ ‘ಜೈ ಶ್ರೀರಾಮ್’ ಘೋಷಣೆಕಾರರು ಅಲ್ಲಿಂದ ಕಾಲ್ಕಿತ್ತಿದ್ದರು. ಆಗ ಮಮತಾ ತನ್ನ ನೆಚ್ಚಿನ ಪದ “ಹರಿದಾಸ್” ಅನ್ನು ಪಠಿಸುತ್ತ ಹೋಗಿದ್ದರು. ಹರಿದಾಸ್ ಪಾಲ್ ಎಂಬುದು ಕಾಲ್ಪನಿಕ ಪಾತ್ರದ ಹೆಸರಾದರೂ ಭವ್ಯತೆಯ ಭ್ರಮೆಯಿಂದ ಬಳಲುತ್ತಿರುವವರನ್ನು ಅಪಹಾಸ್ಯ ಮಾಡಲು ಇದನ್ನು ಬಂಗಾಳಿಗಳು ಬಳಸುತ್ತಾರೆ.

ಫೆಬ್ರವರಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಮತಾ ದೀದಿಯವರ ಈ ಹರಿದಾಸ್ ಘೋಷಣೆಯ ಬಗ್ಗೆ ಟೀಕೆ ಮಾಡುತ್ತ, ವಿಧಾನಸಭೆ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಮಮತಾ ಜೈಶ್ರೀರಾಂ ಅನ್ನು ಜಪಿಸುತ್ತ ಕೂಡಲಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ: ಬೆಳಗಾವಿ ಲಿಂಗಾಯತರ ಕೋಟೆಯಲ್ಲಿ ಸತೀಶ್ ಜಾರಕಿಹೊಳಿ ಹೋರಾಟ: ಅಹಿಂದ ಒಟ್ಟುಗೂಡುವುದೇ? ಗೆದ್ರೆ ಯಮಕನಮರಡಿಯಲ್ಲಿ ಪ್ರಿಯಾಂಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...