Homeಮುಖಪುಟಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ ಕ್ಷೇತ್ರದಲ್ಲೇ ನನ್ನ ವಿರುದ್ಧ ಎರಡು ಸುಳ್ಳು ಅಫಿಡವಿಟ್‌ ಗಳನ್ನು ಸಲ್ಲಿಸಿ ನಾಮಪತ್ರವನ್ನು ರದ್ದುಗೊಳಿಸಲು ಯತ್ನಿಸಿದರು. ಅವರು ಯಶಸ್ವಿಯಾಗಲಿಲ್ಲ, ಆದರೆ ಹಲವು ಬಾರಿ ಪ್ರಯತ್ನಿಸಿದರು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ನನ್ನನ್ನೇ ಸ್ಪರ್ಧಿಸದಂತೆ ತಡೆಯಲು ಪ್ರಯತ್ನಿಸಿದ್ದರೆ, ಸಾಮಾನ್ಯ ಜನರಿಗೆ ಏನು ಮಾಡಬಹುದು ಎಂಬುದನ್ನು ನೀವು ಅರ್ಥಮಾಡಿಕೊಳ್ಳಿ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನಾಮಪತ್ರ ಪರಿಶೀಲನೆ ವೇಳೆ ಕೆಲವು ಗೊಂದಲಗಳು ಎದುರಾಗಿತ್ತು. ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ಅವರ ಪತ್ನಿ ಹಾಗೂ ಸೂಚಕರಾದ ಇಸ್ಮತ್ ಹಕೀಮ್ ಅವರ ಹೆಸರಿನ ವ್ಯತ್ಯಾಸದ ಬಗ್ಗೆ ಪ್ರಶ್ನೆ ಎತ್ತಲಾಗಿತ್ತು. ಅವರು ವಿವಾಹಕ್ಕೂ ಮೊದಲು ‘ಇಸ್ಮತ್ ಅರಾ’ ಎಂಬ ಹೆಸರನ್ನು ಬಳಸುತ್ತಿದ್ದರು. ನಂತರ ದಾಖಲೆಗಳಲ್ಲಿ ‘ಇಸ್ಮತ್ ಹಕೀಮ್’ ಎಂದು ಬದಲಾಯಿಸಲಾಗಿತ್ತು. ಪರಿಶೀಲನೆ ವೇಳೆ ದಾಖಲೆಗಳನ್ನು ಸಲ್ಲಿಸಿದ ಬಳಿಕ ಈ ಗೊಂದಲ ನಿವಾರಣೆಯಾಯಿತು ಎಂದು ವರದಿಯಾಗಿದೆ.

“ಇಂತಹ ವಿಷಯಗಳು ಸಾಮಾನ್ಯವಾಗಿ ಕೆಲವೇ ನಿಮಿಷಗಳಲ್ಲಿ ಮುಗಿಯುತ್ತವೆ. ಆದರೆ, ಇಲ್ಲಿ ಸೂಚಕರನ್ನು ಸುಮಾರು ಎರಡು ಗಂಟೆಗಳ ಕಾಲ ಕಾಯುವಂತೆ ಮಾಡಲಾಯಿತು. ಇದರಿಂದ ಅನುಮಾನ ಉಂಟಾಯಿತು” ಎಂದು ಟಿಎಂಸಿ ಸದಸ್ಯರೊಬ್ಬರು ಹೇಳಿದ್ದಾರೆ.

ವರದಿಗಳ ಪ್ರಕಾರ, ಇನ್ನೊಂದು ಗೊಂದಲ, ಸುಮಾರು ಎರಡು ದಶಕಗಳ ಹಿಂದೆ ಬಹಿರಂಗಪಡಿಸದ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಡಲಾಗಿತ್ತು. ಆದರೆ ಇದಕ್ಕೆ ಯಾವುದೇ ಪುರಾವೆಗಳು ಇರಲಿಲ್ಲ ಎಂದು ಪಕ್ಷದ ಕಾರ್ಯಕಾರಿಣಿ ಸ್ಪಷ್ಟಪಡಿಸಿದ್ದಾರೆ. ಆ ವಿಭಾಗವನ್ನು ‘ಅನ್ವಯಿಸುವುದಿಲ್ಲ’ ಎಂದು ಗುರುತಿಸಲಾಗಿತ್ತು.

ಮೂರನೇ ಗೊಂದಲವು ಮತಪತ್ರದ ವ್ಯವಸ್ಥೆಗೆ (ಬ್ಯಾಲೆಟ್ ಲಾಜಿಸ್ಟಿಕ್ಸ್) ಸಂಬಂಧಿಸಿದ್ದಾಗಿತ್ತು. ಆರಂಭದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದ ಕಾರಣ, ಬ್ಯಾನರ್ಜಿಯವರ ಹೆಸರು ಎರಡನೇ ಇವಿಎಂ ಯಂತ್ರಕ್ಕೆ ಹೋಗುವ ಸಾಧ್ಯತೆಯಿತ್ತು, ಏಕೆಂದರೆ ಒಂದು ಯಂತ್ರವು ಕೇವಲ 16 ಹೆಸರುಗಳನ್ನು ಮಾತ್ರ ಪ್ರದರ್ಶಿಸಬಲ್ಲದು. ಇದಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಕ್ಷೇಪ ವ್ಯಕ್ತಪಡಿಸಿತು. ಈ ಬಗ್ಗೆ ಮಾತನಾಡಿದ ಪಕ್ಷದ ಪದಾಧಿಕಾರಿಯೊಬ್ಬರು, “ಒಬ್ಬ ಹಾಲಿ ಮುಖ್ಯಮಂತ್ರಿಯ ಹೆಸರನ್ನು ಎರಡನೇ ಇವಿಎಂ ಯಂತ್ರಕ್ಕೆ ತಳ್ಳಲು ಸಾಧ್ಯವಿಲ್ಲ, ಇದು ಮತದಾರರಲ್ಲಿ ಗೊಂದಲ ಉಂಟುಮಾಡುತ್ತಿತ್ತು” ಎಂದಿದ್ದಾರೆ. ನಂತರ ನಾಲ್ಕು ನಾಮಪತ್ರಗಳು ರದ್ದಾದವು, ಇದರಿಂದಾಗಿ ಒಂದಕ್ಕಿಂತ ಹೆಚ್ಚು ಯಂತ್ರಗಳನ್ನು ಬಳಸುವ ಅಗತ್ಯವಿಲ್ಲದಂತಾಯಿತು ಎಂದು ವರದಿಯಾಗಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...