Homeಮುಖಪುಟಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

ಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

- Advertisement -
- Advertisement -

ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮಿತ್ರಪಕ್ಷವಾಗಿ ಆರ್‌ಜೆಡಿ ಮೂರರಿಂದ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

“ಬಿಹಾರದ ಅನೇಕ ಜನರು ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿದ್ದಾರೆ. ಮಮತಾ ಜಿ ಅವರನ್ನು ಬೆಂಬಲಿಸುವಂತೆ ನಾನು ಬಿಹಾರದ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನು ಉಲ್ಲೇಖಿಸಿದ ಮಮತಾ ಬ್ಯಾನರ್ಜಿ, “ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಜಯಗಳಿಸುವುದನ್ನು ತಡೆಯಲು ಬಿಜೆಪಿ ಎಲ್ಲಾ ರೀತಿಯ ತಂತ್ರಗಳನ್ನು ಬಳಸಿತ್ತು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮೃತ ಮಹಿಳೆಯ ಮಾನಹಾನಿ: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ 6 ಜನರ ವಿರುದ್ಧ ಪ್ರಕರಣ

ಪಶ್ಚಿಮ ಬಂಗಾಳದಲ್ಲಿ ವಾಸಿಸುವ ಬಂಗಾಳಿಗಳಲ್ಲದ ಜನರು ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡಾ 6 ರಷ್ಟು ಇದ್ದಾರೆ. ಅನೇಕ ಸ್ಥಳಗಳಲ್ಲಿ ಬಿಹಾರದಿಂದ ವಲಸೆ ಬಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ಒಟ್ಟು ಮತದಾರರಲ್ಲಿ ಶೇಕಡಾ 12 ರಿಂದ 14 ರಷ್ಟಿದೆ. ರಾಜ್ಯದಲ್ಲಿನ ಚುನಾವಣಾ ಕಣವು ಸೆನ್ಷೇಷನ್ ಆಗಿರುವ ಈ ಸಂದರ್ಭದಲ್ಲಿ ಆರ್‌ಜೆಡಿ ಪಕ್ಷದ ಈ ನಿರ್ಧಾರವು ಮಹತ್ವದ್ದಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಟಿಎಂಸಿ ಮುಖಂಡರೊಬ್ಬರು, “ಶೇಕಡಾ 6 ರಷ್ಟು ಬಂಗಾಳಿಗಳಲ್ಲದ ಮತದಾರರು ಬಿಹಾರ ಮೂಲದವರು. 2019 ರ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆಯನ್ನು ಗಮನಿಸಿದರೆ, ನಾವು ಕೇವಲ ಶೇಕಡಾ 3ರಷ್ಟು ಮತಗಳಿಂದ ಮುಂದಿದ್ದೇವೆ. ಬಂಗಾಳಿಗಳಲ್ಲದ ಮತದಾರರು ಕೆಲವು ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರವಹಿಸಬಹುದು. ಹಾಗಾಗಿ ಈ ಕ್ರಮವು ಖಂಡಿತವಾಗಿಯೂ ನಮಗೆ ಚುನಾವಣಾ ರೀತಿಯಲ್ಲಿ ಮಹತ್ವದ್ದಾಗಿದೆ” ಎಂದು ಹೇಳಿದರು.


ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...