Homeಮುಖಪುಟಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

- Advertisement -
- Advertisement -

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ ಮತ್ತು ಸಿಲಿಗುರಿಯಿಂದ ಕೂಚ್ ಬೆಹಾರ್, ದಿನಜ್‌ಪುರದವರೆಗೆ ಹಲವಾರು ಜಾನುವಾರು ಮಾರುಕಟ್ಟೆಗಳಲ್ಲಿ ಕಡಿಮೆ ಚಟುವಟಿಕೆ ಇತ್ತು. ಇದರಿಂದ ರೈತರು ತಮ್ಮ ಜೀವನೋಪಾಯದ ಬಗ್ಗೆ ಚಿಂತಿತರಾಗಿದ್ದಾರೆ.

ಬುಧವಾರ ಮಾರುಕಟ್ಟೆಗಳಿಗೆ ಆಗಮಿಸಿದ ಅನೇಕ ಜಾನುವಾರು ರೈತರು ಯಾವುದೇ ಜಾನುವಾರು ಮಾರಾಟ ಮಾಡದೆ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಪ್ರತಿ ವರ್ಷ ಈದ್ ಅಲ್-ಅಧಾ ಮೊದಲು ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿತ್ತು, ಆದರೆ ಈ ಬಾರಿ ವಹಿವಾಟುಗಳು ಬಹುತೇಕ ನಿಂತುಹೋಗಿವೆ ಎಂದು ವ್ಯಾಪಾರಿಗಳು ಹೇಳಿಕೊಂಡಿದ್ದಾರೆ.

ಮಾಲ್ಡಾದ ಮಾಣಿಕ್‌ಚಕ್ ಪ್ರದೇಶದ ಮಥುರಾಪುರದ ಯುವ ಜಾನುವಾರು ಮಾಲೀಕ ಬಾಪಿ ಮೊಂಡಲ್ ಮಾತನಾಡಿ, ತನ್ನ ಜಾನುವಾರುಗಳಿಗೆ ಆಹಾರ ಮತ್ತು ನಿರ್ವಹಣೆಗಾಗಿ ದಿನವಿಡೀ ಹಣವನ್ನು ಖರ್ಚು ಮಾಡಿದ್ದೇನೆ. ಆದರೆ, ಖರೀದಿದಾರರನ್ನು ಹುಡುಕಲು ವಿಫಲನಾಗಿದ್ದೇನೆ ಎಂದು ಹೇಳಿದರು.

“ನಾನು ನನ್ನ ಜಾನುವಾರುಗಳಿಗೆ ಪ್ರತಿದಿನ ಸುಮಾರು 200 ರೂ. ಖರ್ಚು ಮಾಡುತ್ತೇನೆ, ಆದರೆ ಯಾವುದೇ ಆದಾಯವಿಲ್ಲ. ಜಾನುವಾರು ವ್ಯಾಪಾರ ಸಂಪೂರ್ಣವಾಗಿ ನಿಂತುಹೋದರೆ, ಪ್ರಾಣಿಗಳಿಗೆ ಮಾತ್ರವಲ್ಲದೆ ನಮಗೂ ಆಹಾರ ಪಡೆದುಕೊಳ್ಳಲು ನಾವು ಕಷ್ಟಪಡುತ್ತೇವೆ” ಎಂದು ಅವರು ಹೇಳಿದರು.

ದನಗಳ ಕೊರತೆಯಿಂದಾಗಿ ಮೇಕೆ ಮಾಂಸದ ಬೆಲೆ ಏರಿಕೆ

ದನಗಳು ಲಭ್ಯವಿಲ್ಲದ ಕಾರಣ, ಅನೇಕ ಜಿಲ್ಲೆಗಳಲ್ಲಿ ಮೇಕೆಗಳಿಗೆ ಬೇಡಿಕೆ ತೀವ್ರವಾಗಿ ಹೆಚ್ಚಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಈದ್ ಅಲ್-ಅಧಾ ಮುನ್ನ ಮೇಕೆ ಮಾಂಸದ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು 800–900 ರೂ.ಗಳಿಂದ ಸುಮಾರು 1,500 ರೂ.ಗಳಿಗೆ ಏರಿದೆ.

ದಕ್ಷಿಣ ದಿನಾಜ್‌ಪುರದ ಕುಮಾರ್‌ಗಂಜ್ ಬ್ಲಾಕ್‌ನಲ್ಲಿರುವ ದೋರಾಹಾ ಗ್ರಾಮದ ರೈತ ತೈಫೂರ್ ಮೊಂಡಲ್, ಅನೇಕ ಕುಟುಂಬಗಳು ಈದ್ ಬಲಿದಾನಕ್ಕಾಗಿ ತಮ್ಮ ಯೋಜನೆಗಳನ್ನು ಬದಲಾಯಿಸುತ್ತಿವೆ ಎಂದು ಹೇಳಿದರು.

“ನಮಗೆ ಈದ್‌ಗಾಗಿ ದನಗಳು ಸಿಗುತ್ತಿಲ್ಲ. ಬದಲಾಗಿ ನಾವು ಮೇಕೆಗಳೊಂದಿಗೆ ಬಕ್ರೀದ್ ಆಚರಿಸುತ್ತೇವೆ” ಎಂದು ಅವರು ಹೇಳಿದರು.

ಮಳೆಗಾಲ ಸಮೀಪಿಸುತ್ತಿದ್ದಂತೆ ಕೃಷಿ ಕೆಲಸದ ಬಗ್ಗೆಯೂ ರೈತರು ಕಳವಳ ವ್ಯಕ್ತಪಡಿಸಿದರು. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ, ಉಳುಮೆ ಮಾಡಲು ಮತ್ತು ಕೃಷಿ ಭೂಮಿಯನ್ನು ಸಮತಟ್ಟು ಮಾಡಲು ಎತ್ತುಗಳು ಇನ್ನೂ ಬೇಕಾಗುತ್ತವೆ. ಆದರೆ, ದನಗಳ ಕೊರತೆಯಿಂದಾಗಿ ರೈತರು ಕೆಲಸ ಮಾಡುವ ಪ್ರಾಣಿಗಳನ್ನು ಖರೀದಿಸುವುದು ಕಷ್ಟಕರವಾಗಿದೆ ಎಂದರು.

ಕೂಚ್ ಬೆಹಾರ್‌ನ ರೈತ ಗಣೇಶ್ ಬರ್ಮನ್ ಮಾತನಾಡಿ, “ಹೆಚ್ಚಿನ ಕೃಷಿಯನ್ನು ಈಗ ಯಂತ್ರಗಳಿಂದ ಮಾಡಲಾಗುತ್ತದೆ, ಆದರೆ ಕೆಲವು ಹೊಲಗಳಲ್ಲಿ ಎತ್ತುಗಳು ಇನ್ನೂ ಅಗತ್ಯವಿದೆ. ಮಾರುಕಟ್ಟೆಯಲ್ಲಿನ ಕೊರತೆಯಿಂದಾಗಿ ಅನೇಕ ರೈತರು ಅವುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ಹೊರಹಾಕಿದರು.

ಜಾನುವಾರು ವ್ಯಾಪಾರದ ಮೇಲೆ ಪರಿಣಾಮ ಬೀರಿದ ಸರ್ಕಾರಿ ಮಾರ್ಗಸೂಚಿ

ಸ್ಥಳೀಯ ವ್ಯಾಪಾರಿಗಳು ಮತ್ತು ರೈತರು ಪಶು ವ್ಯಾಪಾರದಲ್ಲಿನ ಕುಸಿತವನ್ನು ಪಶ್ಚಿಮ ಬಂಗಾಳ ಸರ್ಕಾರವು ಬಲಿಗಾಗಿ ಪ್ರಾಣಿಗಳ ಮಾರಾಟದ ಕುರಿತು ಇತ್ತೀಚೆಗೆ ಹೊರಡಿಸಿದ ಮಾರ್ಗಸೂಚಿಗಳ ಕಡೆಗೆ ಬೊಟ್ಟು ಮಾಡಿದ್ದಾರೆ.

ಪತಿರಾಮ್, ಹರಿರಾಂಪುರ್, ದಂಗರ್‌ಹ್ಯಾಟ್, ದುರ್ಗಾಪುರ್ ಹಾತ್, ಕಮಲಾಬರಿ ಹಾತ್, ಬಂಗಲ್‌ಬರಿ ಹಾತ್, ರಾಮಗಂಜ್ ಹಾತ್, ಪಂಜಿಪರಾ ಹಾತ್ ಮತ್ತು ಮಲ್ಲಿಕ್‌ಪುರ್ ಹಾತ್ ಸೇರಿದಂತೆ ಉತ್ತರ ಬಂಗಾಳದಾದ್ಯಂತದ ಹಲವಾರು ಜಾನುವಾರು ಮಾರುಕಟ್ಟೆಗಳು ಕಳೆದ ಕೆಲವು ದಿನಗಳಿಂದ ಜಾನುವಾರು ಖರೀದಿ ಮತ್ತು ಮಾರಾಟದಲ್ಲಿ ಪ್ರಮುಖ ಕುಸಿತವನ್ನು ಕಂಡಿವೆ ಎಂದು ವರದಿಯಾಗಿದೆ.

ಇಟಾಹಾರ್‌ನ ರೈತ ಇಸ್ರೇಲ್ ಅಲಿ, ನಿರ್ಬಂಧಗಳು ಜಾನುವಾರು ಮಾಲೀಕರಿಗೆ ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸಿವೆ ಎಂದು ಹೇಳಿದರು.

“ಜಾನುವಾರು ವ್ಯಾಪಾರದ ಮೇಲಿನ ನಿರ್ಬಂಧಗಳಿಂದಾಗಿ, ಎಲ್ಲೆಡೆ ಸಮಸ್ಯೆಗಳು ಹೆಚ್ಚುತ್ತಿವೆ. ಹಾಲು ನೀಡುವುದನ್ನು ನಿಲ್ಲಿಸಿದ ಹಸುಗಳನ್ನು ಸಹ ಮಾರಾಟ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಜಾನುವಾರು ವ್ಯಾಪಾರದಲ್ಲಿನ ನಿಧಾನಗತಿಯು ವಾರದ ಮಾರುಕಟ್ಟೆಗಳನ್ನು ಅವಲಂಬಿಸಿರುವ ಸಣ್ಣ ವ್ಯವಹಾರಗಳ ಮೇಲೂ ಪರಿಣಾಮ ಬೀರಿದೆ.

ಹಳೆ ಮಾಲ್ಡಾದ ಬೊಲಾಟುಲಿಯಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಸಾಪ್ತಾಹಿಕ ಜಾನುವಾರು ಮಾರುಕಟ್ಟೆಯಲ್ಲಿ, ಆಹಾರ ಮಳಿಗೆಯ ಮಾಲೀಕ ಸಾಧನ್ ಸರ್ಕಾರ್ ಅವರು ಸಂತೆಗೆ ಕಡಿಮೆ ಜನರು ಭೇಟಿ ನೀಡಿದ್ದರಿಂದ ಆದಾಯದಲ್ಲಿ ಕುಸಿತ ಕಂಡಿದೆ ಎಂದು ಹೇಳಿದರು.

“ಮಾರುಕಟ್ಟೆಯು ಮುಖ್ಯವಾಗಿ ಜಾನುವಾರು ವ್ಯಾಪಾರವನ್ನು ಅವಲಂಬಿಸಿದೆ. ಜಾನುವಾರುಗಳನ್ನು ಮಾರಾಟ ಮಾಡದಿದ್ದರೆ, ಜನರು ಬರುವುದಿಲ್ಲ. ಅದು ನನ್ನ ಆಹಾರ ವ್ಯವಹಾರದ ಮೇಲೂ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಉತ್ತರ ಬಂಗಾಳದಾದ್ಯಂತದ ರೈತರು ಮತ್ತು ವ್ಯಾಪಾರಿಗಳು ಈದ್ ಅಲ್-ಅಧಾ ಆಚರಣೆ. ಗ್ರಾಮೀಣ ಜೀವನೋಪಾಯ ಎರಡಕ್ಕೂ ಪರಿಸ್ಥಿತಿ ಅನಿಶ್ಚಿತತೆಯನ್ನು ಸೃಷ್ಟಿಸಿದೆ ಎಂದು ಹೇಳುತ್ತಾರೆ. ವಿಶೇಷವಾಗಿ ಕೃಷಿ ಋತು ಪ್ರಾರಂಭವಾಗುವ ಮೊದಲು ಅನೇಕರು ಜಾನುವಾರು ಮಾರಾಟವನ್ನು ಅವಲಂಬಿಸಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...