Homeಮುಖಪುಟಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ವಿಧಿಸಿದ್ದಾರೆ.

ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೆ ಅನಧಿಕೃತ, ಕಾನೂನುಬಾಹಿರ ತನಿಖೆಯ ನೆಪ ನೆಪದಲ್ಲಿ ಪೊಲೀಸರು ರಾಜಭವನ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜಭವನ ತಿಳಿಸಿದ್ದು, ಇದು ಪ.ಬಂಗಾಳದ ರಾಜ್ಯ ಸರಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ.

ಈ ಕುರಿತು ರಾಜಭವನ ಹೇಳಿಕೆಯನ್ನು ಹೊರಡಿಸಿದ್ದು, ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಮುಂದಿನ ಕಾನೂನು ಕ್ರಮಗಳ ಕುರಿತು ಸಲಹೆಗಾಗಿ ಭಾರತದ ಅಟಾರ್ನಿ ಜನರಲ್ ಅವರನ್ನು ಸಂಪರ್ಕಿಸಲಾಗಿದೆ. ಅನಧಿಕೃತವಾಗಿ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನವನ್ನು ಪ್ರವೇಶಿಸುವುದನ್ನು ಗೌರವಾನ್ವಿತ ರಾಜ್ಯಪಾಲರು ನಿಷೇಧಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯಪಾಲರು ರಾಜಭವನದ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ರಾಜ್ಯಪಾಲರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸಂವಿಧಾನ ವಿರೋಧಿ ಮಾಧ್ಯಮ ಹೇಳಿಕೆಗಳನ್ನು ನೀಡಿದ್ದಾರೆಂದು ರಾಜ್ಯ ಹಣಕಾಸು ಇಲಾಖೆ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರನ್ನು ರಾಜಧಾನಿ ಕೋಲ್ಕತ್ತಾ, ಡಾರ್ಜಿಲಿಂಗ್ ಮತ್ತು ಬ್ಯಾರಕ್‌ಪೋರ್‌ನಲ್ಲಿರುವ ಭವನದ ಆವರಣಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿರ್ಬಂಧ ವಿಧಿಸಿದ್ದಾರೆ.

ರಾಜಭವನದಲ್ಲಿ ಏನಾಗುತ್ತಿದೆ ಎಂದು ನಾನು ಆಶ್ಚರ್ಯ ಪಡುತ್ತೇನೆ ಮತ್ತು ಅದು ಕೂಡ ಪ್ರಧಾನ ಮಂತ್ರಿ ರಾಜ್ಯಕ್ಕೆ ಬರುವ ದಿನದಂದು, ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು  ರಾಜ್ಯಪಾಲರ ಲೈಂಗಿಕ ದೌರ್ಜನ್ಯದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಹೇಳಿದ್ದರು.

ರಾಜ್ಯಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಮೊದಲು ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...