Homeಮುಖಪುಟಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

- Advertisement -
- Advertisement -

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ ತನ್ನ ವಿರುದ್ಧ ಸಾರ್ವಜನಿಕ ಹೇಳಿಕೆಯನ್ನು ನೀಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರಿಗೂ ನಿಷೇಧವನ್ನು ವಿಧಿಸಿದ್ದಾರೆ.

ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೆ ಅನಧಿಕೃತ, ಕಾನೂನುಬಾಹಿರ ತನಿಖೆಯ ನೆಪ ನೆಪದಲ್ಲಿ ಪೊಲೀಸರು ರಾಜಭವನ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜಭವನ ತಿಳಿಸಿದ್ದು, ಇದು ಪ.ಬಂಗಾಳದ ರಾಜ್ಯ ಸರಕಾರ ಮತ್ತು ರಾಜಭವನದ ನಡುವಿನ ಸಂಘರ್ಷವನ್ನು ಹೆಚ್ಚಿಸಿದೆ.

ಈ ಕುರಿತು ರಾಜಭವನ ಹೇಳಿಕೆಯನ್ನು ಹೊರಡಿಸಿದ್ದು, ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಮುಂದಿನ ಕಾನೂನು ಕ್ರಮಗಳ ಕುರಿತು ಸಲಹೆಗಾಗಿ ಭಾರತದ ಅಟಾರ್ನಿ ಜನರಲ್ ಅವರನ್ನು ಸಂಪರ್ಕಿಸಲಾಗಿದೆ. ಅನಧಿಕೃತವಾಗಿ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನವನ್ನು ಪ್ರವೇಶಿಸುವುದನ್ನು ಗೌರವಾನ್ವಿತ ರಾಜ್ಯಪಾಲರು ನಿಷೇಧಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯಪಾಲರು ರಾಜಭವನದ ಸಿಬ್ಬಂದಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ರಾಜ್ಯಪಾಲರು ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸಂವಿಧಾನ ವಿರೋಧಿ ಮಾಧ್ಯಮ ಹೇಳಿಕೆಗಳನ್ನು ನೀಡಿದ್ದಾರೆಂದು ರಾಜ್ಯ ಹಣಕಾಸು ಇಲಾಖೆ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರನ್ನು ರಾಜಧಾನಿ ಕೋಲ್ಕತ್ತಾ, ಡಾರ್ಜಿಲಿಂಗ್ ಮತ್ತು ಬ್ಯಾರಕ್‌ಪೋರ್‌ನಲ್ಲಿರುವ ಭವನದ ಆವರಣಕ್ಕೆ ಪ್ರವೇಶಿಸದಂತೆ ರಾಜ್ಯಪಾಲರು ನಿರ್ಬಂಧ ವಿಧಿಸಿದ್ದಾರೆ.

ರಾಜಭವನದಲ್ಲಿ ಏನಾಗುತ್ತಿದೆ ಎಂದು ನಾನು ಆಶ್ಚರ್ಯ ಪಡುತ್ತೇನೆ ಮತ್ತು ಅದು ಕೂಡ ಪ್ರಧಾನ ಮಂತ್ರಿ ರಾಜ್ಯಕ್ಕೆ ಬರುವ ದಿನದಂದು, ಗವರ್ನರ್ ಲೈಂಗಿಕ ಕಿರುಕುಳದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ನಾವು ಯಾವ ರೀತಿಯ ರಾಜ್ಯದಲ್ಲಿ ಇದ್ದೇವೆ ಎಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು  ರಾಜ್ಯಪಾಲರ ಲೈಂಗಿಕ ದೌರ್ಜನ್ಯದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಹೇಳಿದ್ದರು.

ರಾಜ್ಯಪಾಲರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಮೊದಲು ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದರು. ಇದರ ಬೆನ್ನಲ್ಲಿ ಪ.ಬಂಗಾಳದಲ್ಲಿ ಪ್ರಕರಣ ಭಾರೀ ಸದ್ದು ಮಾಡಿದೆ. ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಉಪ ಆಯುಕ್ತೆ ಇಂದಿರಾ ಮುಖರ್ಜಿ, ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ನಡೆಸುತ್ತಿದ್ದೇವೆ. ಕಾನೂನು ತಜ್ಞರೊಂದಿಗೆ ಈ ವಿಷಯದ ಬಗ್ಗೆ ಸಮಾಲೋಚಿಸುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....