Homeಮುಖಪುಟರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

- Advertisement -
- Advertisement -

ಪ್ರಜಾಪ್ರಭುತ್ವವು ತನ್ನ ಬೇರುಗಳನ್ನು ಇಡೀ ದೇಶಾದ್ಯಂತ ಬಲಪಡಿಸಿಕೊಳ್ಳುತ್ತಿದ್ದರೆ, ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯವಾಗಿ ಪಶ್ಚಿಮ ಬಂಗಾಳ ಉಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಪಶ್ಚಿಮ ಬಂಗಾಳ ಜನ ಸಂವಾದ’ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 2014 ರಿಂದ ರಾಜ್ಯದಲ್ಲಿ ನಡೆದ ರಾಜಕೀಯ ಯುದ್ಧದ ನಡುವೆ ಪ್ರಾಣ ಕಳೆದುಕೊಂಡ ಅನೇಕ ಪಕ್ಷದ ಕಾರ್ಯಕರ್ತರನ್ನು ನೆನೆಸಿಕೊಳ್ಳುತ್ತೇನೆ. “ಸೋನಾರ್ ಬಾಂಗ್ಲಾ (ಸುವರ್ಣ ಬಂಗಾಳ) ಅಭಿವೃದ್ಧಿಗೆ ಅವರು ಕೊಡುಗೆ ನೀಡಿದ್ದರಿಂದ ಅವರ ಕುಟುಂಬಗಳಿಗೆ ನನ್ನ ಗೌರವವನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಳಿ ನಡೆಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನಕ್ಕೆ ತಾವು ಅವಕಾಶ ನೀಡುತ್ತಿಲ್ಲ, ಇದು ದೇಶಾದ್ಯಂತ ಅನೇಕ ಜನರಿಗೆ ಪ್ರಯೋಜನವನ್ನು ನೀಡಿದೆ. ಬಂಗಾಳದ ಜನರು ಕೇಳುತ್ತಿದ್ದಾರೆ. ಇದನ್ನು ಕಾರ್ಯಗತಗೊಳಿಸಲು ನೀವು ಯಾಕೆ ಬಿಡುತ್ತಿಲ್ಲ?” ಎಂದು ಶಾ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಬೆಲೆ ತೆರಬೇಕಾಗುತ್ತದೆ. ಬಂಗಾಳದ ಜನ ಅವರನ್ನು ರಾಜಕೀಯ ನಿರಾಶ್ರಿತರನ್ನಾಗಿಸಲಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.

ಮಮತಾ ಅವರೇ ಬಂಗಾಳದ ಮಾಟುವಾ ಮತ್ತು ನಮಾಶುದ್ರ ಸಮುದಾಯದ ಜನರು ಪೌರತ್ವ ಪಡೆಯುವುದು ನಿಮಗೆ ಇಷ್ಟವಿಲ್ಲವೇ? ಮತ್ತೆ ಈ ಕಾಯ್ದೆಯ ವಿರುದ್ಧ ನೀವು ಏಕೆ ಕೋಪಗೊಂಡಿರಿ? ಎಂದು ಪ್ರಶ್ನಿಸಿದ್ದಾರೆ.

“ಭಾರತದಲ್ಲಿ ಓಲೈಕೆ ರಾಜಕಾರಣವನ್ನು ನಿಲ್ಲಿಸುವ ಸಲುವಾಗಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಬಂಗಾಳದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಿರಾಶ್ರಿತರಿಗೆ ದಶಕಗಳಿಂದ ಮಾಡಲಾಗಿರುವ ಅನ್ಯಾಯವನ್ನು ತಪ್ಪುಗಳನ್ನು ಕೊನೆಗೊಳಿಸಬೇಕು. ಆ ನಿಟ್ಟಿನಲ್ಲಿ ಸಿಎಎ ಕಾಯ್ದೆ ಒಂದು ಉತ್ತಮ ಹೆಜ್ಜೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುವ ವಿಚಾರದಲ್ಲೂ ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ರಾಜಕೀಯ ದಾಳಿ ನಡೆಸಿರುವ ಅಮಿತ್ ಶಾ, “ವಲಸೆ ಕಾರ್ಮಿಕರನ್ನು ಸಾಗಿಸಲು ಬಂಗಾಳ ಸರ್ಕಾರ ಅತಿ ಕಡಿಮೆ ರೈಲುಗಳನ್ನು ಕೇಳಿತ್ತು. ಕೇವಲ 236 ರೈಲುಗಳಲ್ಲಿ 3 ಲಕ್ಷ ವಲಸಿಗರನ್ನು ಅವರ ಸ್ವಂತ ನೆಲೆಗಳಿಗೆ ತಲುಪಿಸಲಾಗಿದೆ” ಎಂದಿದ್ದಾರೆ.

“ನರೇಂದ್ರ ಮೋದಿಯವರಿಗೆ ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯ ಕಾರಣದಿಂದಲೇ ಮಮತಾ ಬ್ಯಾನರ್ಜಿ ಆಯುಷ್ಮಾನ್ ಭಾರತ್ ಮತ್ತು ಇತರ ಕೇಂದ್ರ ಸರಕಾರದ ಯೋಜನೆಗಳನ್ನು ಬಂಗಾಳದಲ್ಲಿ ಸ್ಥಗಿತಗೊಳಿಸುತ್ತಿದ್ದಾರೆ” ಎಂದು ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಂಗಾಳದ ಜನರಿಗೆ ಕೇಂದ್ರ ಸರ್ಕಾರದ ಆರೋಗ್ಯದ ಪ್ರಯೋಜನಗಳನ್ನು ತಲುಪಿಸಲು ಮಮತಾ ಬ್ಯಾನರ್ಜಿ ಏಕೆ ಅವಕಾಶ ನೀಡುತ್ತಿಲ್ಲ? ನಿಮ್ಮ ರಾಜಕೀಯಕ್ಕೆ ಜನರ ಯೋಗಕ್ಷೇಮವನ್ನು ಏಕೆ ಪಣವಿಡುತ್ತಿದ್ದೀರಿ? ಕೇಜ್ರಿವಾಲ್ ಸೇರಿದಂತೆ ಎಲ್ಲಾ ರಾಜ್ಯ ನಾಯಕರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ನಿಮ್ಮ ಸಮಸ್ಯೆ ಏನು? ಎಂದು ಪ್ರಶ್ನೆ ಮಾಡಿರುವ ಅಮಿತ್ ಶಾ. ಬಂಗಾಳದಲ್ಲಿ ಬಿಜೆಪಿ ಗೆದ್ದು ಸ್ವತಂತ್ಯ್ರ ಸರ್ಕಾರ ರಚನೆ ಮಾಡಿದ ನಂತರ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುವುದು” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...