Homeಮುಖಪುಟರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

- Advertisement -
- Advertisement -

ಪ್ರಜಾಪ್ರಭುತ್ವವು ತನ್ನ ಬೇರುಗಳನ್ನು ಇಡೀ ದೇಶಾದ್ಯಂತ ಬಲಪಡಿಸಿಕೊಳ್ಳುತ್ತಿದ್ದರೆ, ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯವಾಗಿ ಪಶ್ಚಿಮ ಬಂಗಾಳ ಉಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಪಶ್ಚಿಮ ಬಂಗಾಳ ಜನ ಸಂವಾದ’ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 2014 ರಿಂದ ರಾಜ್ಯದಲ್ಲಿ ನಡೆದ ರಾಜಕೀಯ ಯುದ್ಧದ ನಡುವೆ ಪ್ರಾಣ ಕಳೆದುಕೊಂಡ ಅನೇಕ ಪಕ್ಷದ ಕಾರ್ಯಕರ್ತರನ್ನು ನೆನೆಸಿಕೊಳ್ಳುತ್ತೇನೆ. “ಸೋನಾರ್ ಬಾಂಗ್ಲಾ (ಸುವರ್ಣ ಬಂಗಾಳ) ಅಭಿವೃದ್ಧಿಗೆ ಅವರು ಕೊಡುಗೆ ನೀಡಿದ್ದರಿಂದ ಅವರ ಕುಟುಂಬಗಳಿಗೆ ನನ್ನ ಗೌರವವನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಳಿ ನಡೆಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನಕ್ಕೆ ತಾವು ಅವಕಾಶ ನೀಡುತ್ತಿಲ್ಲ, ಇದು ದೇಶಾದ್ಯಂತ ಅನೇಕ ಜನರಿಗೆ ಪ್ರಯೋಜನವನ್ನು ನೀಡಿದೆ. ಬಂಗಾಳದ ಜನರು ಕೇಳುತ್ತಿದ್ದಾರೆ. ಇದನ್ನು ಕಾರ್ಯಗತಗೊಳಿಸಲು ನೀವು ಯಾಕೆ ಬಿಡುತ್ತಿಲ್ಲ?” ಎಂದು ಶಾ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಬೆಲೆ ತೆರಬೇಕಾಗುತ್ತದೆ. ಬಂಗಾಳದ ಜನ ಅವರನ್ನು ರಾಜಕೀಯ ನಿರಾಶ್ರಿತರನ್ನಾಗಿಸಲಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.

ಮಮತಾ ಅವರೇ ಬಂಗಾಳದ ಮಾಟುವಾ ಮತ್ತು ನಮಾಶುದ್ರ ಸಮುದಾಯದ ಜನರು ಪೌರತ್ವ ಪಡೆಯುವುದು ನಿಮಗೆ ಇಷ್ಟವಿಲ್ಲವೇ? ಮತ್ತೆ ಈ ಕಾಯ್ದೆಯ ವಿರುದ್ಧ ನೀವು ಏಕೆ ಕೋಪಗೊಂಡಿರಿ? ಎಂದು ಪ್ರಶ್ನಿಸಿದ್ದಾರೆ.

“ಭಾರತದಲ್ಲಿ ಓಲೈಕೆ ರಾಜಕಾರಣವನ್ನು ನಿಲ್ಲಿಸುವ ಸಲುವಾಗಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಬಂಗಾಳದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಿರಾಶ್ರಿತರಿಗೆ ದಶಕಗಳಿಂದ ಮಾಡಲಾಗಿರುವ ಅನ್ಯಾಯವನ್ನು ತಪ್ಪುಗಳನ್ನು ಕೊನೆಗೊಳಿಸಬೇಕು. ಆ ನಿಟ್ಟಿನಲ್ಲಿ ಸಿಎಎ ಕಾಯ್ದೆ ಒಂದು ಉತ್ತಮ ಹೆಜ್ಜೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುವ ವಿಚಾರದಲ್ಲೂ ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ರಾಜಕೀಯ ದಾಳಿ ನಡೆಸಿರುವ ಅಮಿತ್ ಶಾ, “ವಲಸೆ ಕಾರ್ಮಿಕರನ್ನು ಸಾಗಿಸಲು ಬಂಗಾಳ ಸರ್ಕಾರ ಅತಿ ಕಡಿಮೆ ರೈಲುಗಳನ್ನು ಕೇಳಿತ್ತು. ಕೇವಲ 236 ರೈಲುಗಳಲ್ಲಿ 3 ಲಕ್ಷ ವಲಸಿಗರನ್ನು ಅವರ ಸ್ವಂತ ನೆಲೆಗಳಿಗೆ ತಲುಪಿಸಲಾಗಿದೆ” ಎಂದಿದ್ದಾರೆ.

“ನರೇಂದ್ರ ಮೋದಿಯವರಿಗೆ ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯ ಕಾರಣದಿಂದಲೇ ಮಮತಾ ಬ್ಯಾನರ್ಜಿ ಆಯುಷ್ಮಾನ್ ಭಾರತ್ ಮತ್ತು ಇತರ ಕೇಂದ್ರ ಸರಕಾರದ ಯೋಜನೆಗಳನ್ನು ಬಂಗಾಳದಲ್ಲಿ ಸ್ಥಗಿತಗೊಳಿಸುತ್ತಿದ್ದಾರೆ” ಎಂದು ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಂಗಾಳದ ಜನರಿಗೆ ಕೇಂದ್ರ ಸರ್ಕಾರದ ಆರೋಗ್ಯದ ಪ್ರಯೋಜನಗಳನ್ನು ತಲುಪಿಸಲು ಮಮತಾ ಬ್ಯಾನರ್ಜಿ ಏಕೆ ಅವಕಾಶ ನೀಡುತ್ತಿಲ್ಲ? ನಿಮ್ಮ ರಾಜಕೀಯಕ್ಕೆ ಜನರ ಯೋಗಕ್ಷೇಮವನ್ನು ಏಕೆ ಪಣವಿಡುತ್ತಿದ್ದೀರಿ? ಕೇಜ್ರಿವಾಲ್ ಸೇರಿದಂತೆ ಎಲ್ಲಾ ರಾಜ್ಯ ನಾಯಕರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ನಿಮ್ಮ ಸಮಸ್ಯೆ ಏನು? ಎಂದು ಪ್ರಶ್ನೆ ಮಾಡಿರುವ ಅಮಿತ್ ಶಾ. ಬಂಗಾಳದಲ್ಲಿ ಬಿಜೆಪಿ ಗೆದ್ದು ಸ್ವತಂತ್ಯ್ರ ಸರ್ಕಾರ ರಚನೆ ಮಾಡಿದ ನಂತರ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುವುದು” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...