Homeಮುಖಪುಟರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ

- Advertisement -
- Advertisement -

ಪ್ರಜಾಪ್ರಭುತ್ವವು ತನ್ನ ಬೇರುಗಳನ್ನು ಇಡೀ ದೇಶಾದ್ಯಂತ ಬಲಪಡಿಸಿಕೊಳ್ಳುತ್ತಿದ್ದರೆ, ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯವಾಗಿ ಪಶ್ಚಿಮ ಬಂಗಾಳ ಉಳಿದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

‘ಪಶ್ಚಿಮ ಬಂಗಾಳ ಜನ ಸಂವಾದ’ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 2014 ರಿಂದ ರಾಜ್ಯದಲ್ಲಿ ನಡೆದ ರಾಜಕೀಯ ಯುದ್ಧದ ನಡುವೆ ಪ್ರಾಣ ಕಳೆದುಕೊಂಡ ಅನೇಕ ಪಕ್ಷದ ಕಾರ್ಯಕರ್ತರನ್ನು ನೆನೆಸಿಕೊಳ್ಳುತ್ತೇನೆ. “ಸೋನಾರ್ ಬಾಂಗ್ಲಾ (ಸುವರ್ಣ ಬಂಗಾಳ) ಅಭಿವೃದ್ಧಿಗೆ ಅವರು ಕೊಡುಗೆ ನೀಡಿದ್ದರಿಂದ ಅವರ ಕುಟುಂಬಗಳಿಗೆ ನನ್ನ ಗೌರವವನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಳಿ ನಡೆಸಿದ ಅವರು, ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನಕ್ಕೆ ತಾವು ಅವಕಾಶ ನೀಡುತ್ತಿಲ್ಲ, ಇದು ದೇಶಾದ್ಯಂತ ಅನೇಕ ಜನರಿಗೆ ಪ್ರಯೋಜನವನ್ನು ನೀಡಿದೆ. ಬಂಗಾಳದ ಜನರು ಕೇಳುತ್ತಿದ್ದಾರೆ. ಇದನ್ನು ಕಾರ್ಯಗತಗೊಳಿಸಲು ನೀವು ಯಾಕೆ ಬಿಡುತ್ತಿಲ್ಲ?” ಎಂದು ಶಾ ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಬೆಲೆ ತೆರಬೇಕಾಗುತ್ತದೆ. ಬಂಗಾಳದ ಜನ ಅವರನ್ನು ರಾಜಕೀಯ ನಿರಾಶ್ರಿತರನ್ನಾಗಿಸಲಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.

ಮಮತಾ ಅವರೇ ಬಂಗಾಳದ ಮಾಟುವಾ ಮತ್ತು ನಮಾಶುದ್ರ ಸಮುದಾಯದ ಜನರು ಪೌರತ್ವ ಪಡೆಯುವುದು ನಿಮಗೆ ಇಷ್ಟವಿಲ್ಲವೇ? ಮತ್ತೆ ಈ ಕಾಯ್ದೆಯ ವಿರುದ್ಧ ನೀವು ಏಕೆ ಕೋಪಗೊಂಡಿರಿ? ಎಂದು ಪ್ರಶ್ನಿಸಿದ್ದಾರೆ.

“ಭಾರತದಲ್ಲಿ ಓಲೈಕೆ ರಾಜಕಾರಣವನ್ನು ನಿಲ್ಲಿಸುವ ಸಲುವಾಗಿ ಸಿಎಎ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಬಂಗಾಳದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಿರಾಶ್ರಿತರಿಗೆ ದಶಕಗಳಿಂದ ಮಾಡಲಾಗಿರುವ ಅನ್ಯಾಯವನ್ನು ತಪ್ಪುಗಳನ್ನು ಕೊನೆಗೊಳಿಸಬೇಕು. ಆ ನಿಟ್ಟಿನಲ್ಲಿ ಸಿಎಎ ಕಾಯ್ದೆ ಒಂದು ಉತ್ತಮ ಹೆಜ್ಜೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸುವ ವಿಚಾರದಲ್ಲೂ ಪಶ್ಚಿಮ ಬಂಗಾಳದ ಸರ್ಕಾರದ ವಿರುದ್ಧ ರಾಜಕೀಯ ದಾಳಿ ನಡೆಸಿರುವ ಅಮಿತ್ ಶಾ, “ವಲಸೆ ಕಾರ್ಮಿಕರನ್ನು ಸಾಗಿಸಲು ಬಂಗಾಳ ಸರ್ಕಾರ ಅತಿ ಕಡಿಮೆ ರೈಲುಗಳನ್ನು ಕೇಳಿತ್ತು. ಕೇವಲ 236 ರೈಲುಗಳಲ್ಲಿ 3 ಲಕ್ಷ ವಲಸಿಗರನ್ನು ಅವರ ಸ್ವಂತ ನೆಲೆಗಳಿಗೆ ತಲುಪಿಸಲಾಗಿದೆ” ಎಂದಿದ್ದಾರೆ.

“ನರೇಂದ್ರ ಮೋದಿಯವರಿಗೆ ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯ ಕಾರಣದಿಂದಲೇ ಮಮತಾ ಬ್ಯಾನರ್ಜಿ ಆಯುಷ್ಮಾನ್ ಭಾರತ್ ಮತ್ತು ಇತರ ಕೇಂದ್ರ ಸರಕಾರದ ಯೋಜನೆಗಳನ್ನು ಬಂಗಾಳದಲ್ಲಿ ಸ್ಥಗಿತಗೊಳಿಸುತ್ತಿದ್ದಾರೆ” ಎಂದು ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಂಗಾಳದ ಜನರಿಗೆ ಕೇಂದ್ರ ಸರ್ಕಾರದ ಆರೋಗ್ಯದ ಪ್ರಯೋಜನಗಳನ್ನು ತಲುಪಿಸಲು ಮಮತಾ ಬ್ಯಾನರ್ಜಿ ಏಕೆ ಅವಕಾಶ ನೀಡುತ್ತಿಲ್ಲ? ನಿಮ್ಮ ರಾಜಕೀಯಕ್ಕೆ ಜನರ ಯೋಗಕ್ಷೇಮವನ್ನು ಏಕೆ ಪಣವಿಡುತ್ತಿದ್ದೀರಿ? ಕೇಜ್ರಿವಾಲ್ ಸೇರಿದಂತೆ ಎಲ್ಲಾ ರಾಜ್ಯ ನಾಯಕರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ. ಆದರೆ, ನಿಮ್ಮ ಸಮಸ್ಯೆ ಏನು? ಎಂದು ಪ್ರಶ್ನೆ ಮಾಡಿರುವ ಅಮಿತ್ ಶಾ. ಬಂಗಾಳದಲ್ಲಿ ಬಿಜೆಪಿ ಗೆದ್ದು ಸ್ವತಂತ್ಯ್ರ ಸರ್ಕಾರ ರಚನೆ ಮಾಡಿದ ನಂತರ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುವುದು” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...