Homeಮುಖಪುಟಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಲ್ಕು ಪಾಲಿಕೆಗಳಲ್ಲೂ ಟಿಎಂಸಿ ಭರ್ಜರಿ ಗೆಲುವು

ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಲ್ಕು ಪಾಲಿಕೆಗಳಲ್ಲೂ ಟಿಎಂಸಿ ಭರ್ಜರಿ ಗೆಲುವು

- Advertisement -
- Advertisement -

ಪಶ್ಚಿಮ ಬಂಗಾಳದ ಸಿಲಿಗುರಿ, ಬಿಧಾನನಗರ, ಅಸನ್ಸೋಲ್ ಮತ್ತು ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಶನ್‌ಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ನಾಲ್ಕೂ ಪಾಲಿಕೆಗಳಲ್ಲಿ ರಾಜ್ಯದ ಆಡಳಿತಾರೂಢ ಟಿಎಂಸಿ ಜಯಗಳಿಸಿದೆ.

ವಿಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಭಾರೀ ಮುಖಭಂಗವನ್ನು ಅನುಭವಿಸಿವೆ. ಸಿಎಂ ಮಮತಾ ಬ್ಯಾನರ್ಜಿ ಅವರು ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಧಾನಗರ್ ಪಾಲಿಕೆಯ ಒಟ್ಟು 41 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದು ಟಿಎಂಸಿ ಅಧಿಕಾರವನ್ನು ಉಳಿಸಿಕೊಂಡಿದೆ. ಕಾಂಗ್ರೆಸ್‌ ಒಂದು ಸ್ಥಾನವನ್ನು ಗೆದಿದ್ದು, ಮತ್ತೊಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಮತ್ತು ಸಿಪಿಐ(ಎಂ) ಖಾತೆ ತೆರೆಯುವಲ್ಲಿ ವಿಫಲವಾಗಿವೆ.

ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಷನ್‌ನ ಒಟ್ಟು 32 ಸ್ಥಾನಗಳಲ್ಲಿ ಟಿಎಂಸಿ 31 ಸ್ಥಾನಗಳನ್ನು ಗೆದ್ದುಕೊಂಡರೆ, ಸಿಪಿಐ(ಎಂ) ಒಂದು ವಾರ್ಡ್‌ನಲ್ಲಿ ಗೆದ್ದಿದೆ.

ಅಸನ್ಸೋಲ್‌ನಲ್ಲಿ 106 ಸ್ಥಾನಗಳ ಪೈಕಿ 90ರಲ್ಲಿ ಟಿಎಂಸಿ ಜಯಭೇರಿ ಬಾರಿಸಿದರೆ, ಬಿಜೆಪಿ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮೂರು, ಎಡಪಕ್ಷಗಳು ಎರಡು ಮತ್ತು ಇತರರು ಮೂರು ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಸಿಪಿಐ(ಎಂ) ನೇತೃತ್ವದ ಎಡರಂಗ ಅಧಿಕಾರದಲ್ಲಿದ್ದ ಸಿಲಿಗುರಿ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ)ಅನ್ನು ಟಿಎಂಸಿ ಕಸಿದುಕೊಂಡಿದೆ. ಒಟ್ಟು 47 ಸ್ಥಾನಗಳ ಪೈಕಿ ಟಿಎಂಸಿ 37 ಸ್ಥಾನಗಳನ್ನು ಗೆದ್ದಿದೆ. ಐದು ಸ್ಥಾನಗಳನ್ನು ಬಿಜೆಪಿ ಪಡೆದಿವೆ. ಕಳೆದ ಬಾರಿ ಆಡಳಿತದಲ್ಲಿದ್ದ ಎಡಪಕ್ಷಗಳು ಕೇವಲ ನಾಲ್ಕು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿವೆ.

ಸಿಲಿಗುರಿ ಪಾಲಿಕೆಗೆ ಟಿಎಂಸಿ ನಾಯಕ ಗೌತಮ್ ದೇಬ್ ಅವರು ಮುಂದಿನ ಮೇಯರ್ ಆಗಲಿದ್ದಾರೆ ಎಂದು ಸಿಎಂ ಬ್ಯಾನರ್ಜಿ ಶೀಘ್ರ ಘೋಷಿಸಿದ್ದಾರೆ. ದೇಬ್ ಅವರು ಚುನಾವಣೆಯಲ್ಲಿ 3000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಬಿಧಾನನಗರ, ಅಸನ್ಸೋಲ್, ಸಿಲಿಗುರಿ ಮತ್ತು ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಷನ್‌ಗಳಿಂದ ಒಟ್ಟು 953 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಕಾರ್ಪೊರೇಶನ್‌ಗಳಿಗೆ ಫೆಬ್ರವರಿ 12 ರಂದು ಮತದಾನ ನಡೆದಿತ್ತು.


ಇದನ್ನೂ ಓದಿರಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...