Homeಮುಖಪುಟಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಲ್ಕು ಪಾಲಿಕೆಗಳಲ್ಲೂ ಟಿಎಂಸಿ ಭರ್ಜರಿ ಗೆಲುವು

ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಲ್ಕು ಪಾಲಿಕೆಗಳಲ್ಲೂ ಟಿಎಂಸಿ ಭರ್ಜರಿ ಗೆಲುವು

- Advertisement -
- Advertisement -

ಪಶ್ಚಿಮ ಬಂಗಾಳದ ಸಿಲಿಗುರಿ, ಬಿಧಾನನಗರ, ಅಸನ್ಸೋಲ್ ಮತ್ತು ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಶನ್‌ಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ನಾಲ್ಕೂ ಪಾಲಿಕೆಗಳಲ್ಲಿ ರಾಜ್ಯದ ಆಡಳಿತಾರೂಢ ಟಿಎಂಸಿ ಜಯಗಳಿಸಿದೆ.

ವಿಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಭಾರೀ ಮುಖಭಂಗವನ್ನು ಅನುಭವಿಸಿವೆ. ಸಿಎಂ ಮಮತಾ ಬ್ಯಾನರ್ಜಿ ಅವರು ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಧಾನಗರ್ ಪಾಲಿಕೆಯ ಒಟ್ಟು 41 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದು ಟಿಎಂಸಿ ಅಧಿಕಾರವನ್ನು ಉಳಿಸಿಕೊಂಡಿದೆ. ಕಾಂಗ್ರೆಸ್‌ ಒಂದು ಸ್ಥಾನವನ್ನು ಗೆದಿದ್ದು, ಮತ್ತೊಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಮತ್ತು ಸಿಪಿಐ(ಎಂ) ಖಾತೆ ತೆರೆಯುವಲ್ಲಿ ವಿಫಲವಾಗಿವೆ.

ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಷನ್‌ನ ಒಟ್ಟು 32 ಸ್ಥಾನಗಳಲ್ಲಿ ಟಿಎಂಸಿ 31 ಸ್ಥಾನಗಳನ್ನು ಗೆದ್ದುಕೊಂಡರೆ, ಸಿಪಿಐ(ಎಂ) ಒಂದು ವಾರ್ಡ್‌ನಲ್ಲಿ ಗೆದ್ದಿದೆ.

ಅಸನ್ಸೋಲ್‌ನಲ್ಲಿ 106 ಸ್ಥಾನಗಳ ಪೈಕಿ 90ರಲ್ಲಿ ಟಿಎಂಸಿ ಜಯಭೇರಿ ಬಾರಿಸಿದರೆ, ಬಿಜೆಪಿ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಮೂರು, ಎಡಪಕ್ಷಗಳು ಎರಡು ಮತ್ತು ಇತರರು ಮೂರು ಸ್ಥಾನಗಳಲ್ಲಿ ಗೆದ್ದಿದ್ದಾರೆ.

ಸಿಪಿಐ(ಎಂ) ನೇತೃತ್ವದ ಎಡರಂಗ ಅಧಿಕಾರದಲ್ಲಿದ್ದ ಸಿಲಿಗುರಿ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ)ಅನ್ನು ಟಿಎಂಸಿ ಕಸಿದುಕೊಂಡಿದೆ. ಒಟ್ಟು 47 ಸ್ಥಾನಗಳ ಪೈಕಿ ಟಿಎಂಸಿ 37 ಸ್ಥಾನಗಳನ್ನು ಗೆದ್ದಿದೆ. ಐದು ಸ್ಥಾನಗಳನ್ನು ಬಿಜೆಪಿ ಪಡೆದಿವೆ. ಕಳೆದ ಬಾರಿ ಆಡಳಿತದಲ್ಲಿದ್ದ ಎಡಪಕ್ಷಗಳು ಕೇವಲ ನಾಲ್ಕು ಸ್ಥಾನಗಳನ್ನು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿವೆ.

ಸಿಲಿಗುರಿ ಪಾಲಿಕೆಗೆ ಟಿಎಂಸಿ ನಾಯಕ ಗೌತಮ್ ದೇಬ್ ಅವರು ಮುಂದಿನ ಮೇಯರ್ ಆಗಲಿದ್ದಾರೆ ಎಂದು ಸಿಎಂ ಬ್ಯಾನರ್ಜಿ ಶೀಘ್ರ ಘೋಷಿಸಿದ್ದಾರೆ. ದೇಬ್ ಅವರು ಚುನಾವಣೆಯಲ್ಲಿ 3000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಬಿಧಾನನಗರ, ಅಸನ್ಸೋಲ್, ಸಿಲಿಗುರಿ ಮತ್ತು ಚಂದರ್‌ನಾಗೂರ್ ಮುನ್ಸಿಪಲ್ ಕಾರ್ಪೊರೇಷನ್‌ಗಳಿಂದ ಒಟ್ಟು 953 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಕಾರ್ಪೊರೇಶನ್‌ಗಳಿಗೆ ಫೆಬ್ರವರಿ 12 ರಂದು ಮತದಾನ ನಡೆದಿತ್ತು.


ಇದನ್ನೂ ಓದಿರಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...