Homeಮುಖಪುಟಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

ಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಮುರ್ಶಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಪೂರ್ವ ಯೋಜಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಗಲಭೆ ಪರಿಸ್ಥಿತಿಯ ಕುರಿತು ಇಮಾರುಗಳೊಂದಿಗೆ ಸಭೆ ನಡೆಸಿದ ಸಿಎಂ, “ಹಿಂಸಾಚಾರದ ಹಿಂದೆ ಟಿಎಂಸಿ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ. ಅವರು ಹೇಳಿದಂತೆ ನಮ್ಮ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳ ಮೇಲೆ ದಾಳಿ ನಡೆಯುತ್ತಿರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ಸಂಸತ್ತಿನ ಟಿಎಂಸಿ ವಕ್ಫ್‌ (ತಿದ್ದುಪಡಿ) ಮಸೂದೆ ವಿರುದ್ದ ಬಲವಾದ ನಿಲುವು ವ್ಯಕ್ತಪಡಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ದದ ಹೋರಾಟದಲ್ಲಿ ಟಿಎಂಸಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ಧಾರೆ.

“ಮುರ್ಶಿದಾಬಾದ್ ಹಿಂಸಾಚಾರದಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ. ಇದು ಒಂದು ವೇಳೆ ನಿಜವಾಗಿದ್ದರೆ, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರತು ರಾಜ್ಯವಲ್ಲ. ಗಡಿ ಕಾಯುತ್ತಿರುವುದು ಬಿಎಸ್‌ಎಫ್‌ ಹೊರತಯ ರಾಜ್ಯ ಸರ್ಕಾರವಲ್ಲ. ಹೊರಗಡೆಯಿಂದ ಬಿಜೆಪಿಯವರು ಬಂದು ಗಲಾಟೆ ಸೃಷ್ಟಿಸಿ ಓಡಿ ಹೋಗಲು ನೀವು ಅನುವು ಮಾಡಿ ಕೊಡುವುದು ಏಕೆ?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ಕೆಲವು ಗೋದಿ ಮೀಡಿಯಾಗಳು ಬಂಗಾಳದ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಅನ್ಯಾಯವಾಗಿ ಬಂಗಾಳವನ್ನು ಗುರಿಯಾಗಿಸಿಕೊಂಡಿವೆ. ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ, ಆದರೆ ಗೋದಿ ಮೀಡಿಯಾಗಳು ಪಶ್ಚಿಮ ಬಂಗಾಳ ಮತ್ತು ನನ್ನ ವಿರುದ್ದ ಮಾತನಾಡುತ್ತಿವೆ” ಎಂದ ಮಮತಾ ಬ್ಯಾನರ್ಜಿ, “ಟೀಕೆ ಮಾಡುವವರು ಸುಳ್ಳು ಸುದ್ದಿ ಹರಡಬೇಡಿ, ನನ್ನ ಜೊತೆ ನೇರವಾಗಿ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಪಶ್ಚಿಮ ಬಂಗಾಳವನ್ನು ಅವಹೇಳನ ಮಾಡಲು ಬಿಜೆಪಿ ಬೆಂಬಲಿತ ಮಾಧ್ಯಮಗಳು ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುತ್ತಿವೆ. ನಾವು ಅವರನ್ನು ಪತ್ತೆ ಹೆಚ್ಚಿದ್ದೇವೆ. ಒಟ್ಟು 8 ವಿಡಿಯೋಗಳಲ್ಲಿ ಕೆಲವು ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದ್ದು. ಬಂಗಾಳದ ಹೆಸರಿಗೆ ಮಸಿ ಬಳಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು” ಎಂದು ಮಮಥಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.

“ಉದ್ಯೋಗ ಸೃಷ್ಟಿ ಮತ್ತು ಹಣದುಬ್ಬರ ವಿಚಾರಗಳಲ್ಲಿ ಕೇಂದ್ರವನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, “ನೀವು ಯುವಜನರಿಗೆ ಎಷ್ಟು ಉದ್ಯೋಗಗಳನ್ನು ಸೃಷ್ಠಿ ಮಾಡಿದ್ದೀರಿ ಎಂದು ಕೇಳಿದ್ದಾರೆ. ಔಷಧಿ, ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ಆದರೆ, ಕೇಂದ್ರ ಸರ್ಕಾರ ಸುಳ್ಳು ನಿರೂಪಣೆ ಮೂಲಕ ಬಂಗಾಳವನ್ನು ಗುರಿಯಾಗಿಸುವುದರಲ್ಲಿ ಬ್ಯುಸಿಯಾಗಿದೆ” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮುರ್ಶಿದಾಬಾದ್ ಗಲಭೆಗೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ “ಹಿಂದೂ ಸಮುದಾಯವನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳನ್ನು ಮಮತಾ ಸರ್ಕಾರ ಬೆಂಬಲಿಸುತ್ತಿದೆ” ಎಂದು ಆರೋಪಿಸಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...