Homeಮುಖಪುಟಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

ಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಮುರ್ಶಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಪೂರ್ವ ಯೋಜಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಗಲಭೆ ಪರಿಸ್ಥಿತಿಯ ಕುರಿತು ಇಮಾರುಗಳೊಂದಿಗೆ ಸಭೆ ನಡೆಸಿದ ಸಿಎಂ, “ಹಿಂಸಾಚಾರದ ಹಿಂದೆ ಟಿಎಂಸಿ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ. ಅವರು ಹೇಳಿದಂತೆ ನಮ್ಮ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳ ಮೇಲೆ ದಾಳಿ ನಡೆಯುತ್ತಿರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ಸಂಸತ್ತಿನ ಟಿಎಂಸಿ ವಕ್ಫ್‌ (ತಿದ್ದುಪಡಿ) ಮಸೂದೆ ವಿರುದ್ದ ಬಲವಾದ ನಿಲುವು ವ್ಯಕ್ತಪಡಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ದದ ಹೋರಾಟದಲ್ಲಿ ಟಿಎಂಸಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ಧಾರೆ.

“ಮುರ್ಶಿದಾಬಾದ್ ಹಿಂಸಾಚಾರದಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ. ಇದು ಒಂದು ವೇಳೆ ನಿಜವಾಗಿದ್ದರೆ, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರತು ರಾಜ್ಯವಲ್ಲ. ಗಡಿ ಕಾಯುತ್ತಿರುವುದು ಬಿಎಸ್‌ಎಫ್‌ ಹೊರತಯ ರಾಜ್ಯ ಸರ್ಕಾರವಲ್ಲ. ಹೊರಗಡೆಯಿಂದ ಬಿಜೆಪಿಯವರು ಬಂದು ಗಲಾಟೆ ಸೃಷ್ಟಿಸಿ ಓಡಿ ಹೋಗಲು ನೀವು ಅನುವು ಮಾಡಿ ಕೊಡುವುದು ಏಕೆ?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ಕೆಲವು ಗೋದಿ ಮೀಡಿಯಾಗಳು ಬಂಗಾಳದ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಅನ್ಯಾಯವಾಗಿ ಬಂಗಾಳವನ್ನು ಗುರಿಯಾಗಿಸಿಕೊಂಡಿವೆ. ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ, ಆದರೆ ಗೋದಿ ಮೀಡಿಯಾಗಳು ಪಶ್ಚಿಮ ಬಂಗಾಳ ಮತ್ತು ನನ್ನ ವಿರುದ್ದ ಮಾತನಾಡುತ್ತಿವೆ” ಎಂದ ಮಮತಾ ಬ್ಯಾನರ್ಜಿ, “ಟೀಕೆ ಮಾಡುವವರು ಸುಳ್ಳು ಸುದ್ದಿ ಹರಡಬೇಡಿ, ನನ್ನ ಜೊತೆ ನೇರವಾಗಿ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಪಶ್ಚಿಮ ಬಂಗಾಳವನ್ನು ಅವಹೇಳನ ಮಾಡಲು ಬಿಜೆಪಿ ಬೆಂಬಲಿತ ಮಾಧ್ಯಮಗಳು ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುತ್ತಿವೆ. ನಾವು ಅವರನ್ನು ಪತ್ತೆ ಹೆಚ್ಚಿದ್ದೇವೆ. ಒಟ್ಟು 8 ವಿಡಿಯೋಗಳಲ್ಲಿ ಕೆಲವು ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದ್ದು. ಬಂಗಾಳದ ಹೆಸರಿಗೆ ಮಸಿ ಬಳಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು” ಎಂದು ಮಮಥಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.

“ಉದ್ಯೋಗ ಸೃಷ್ಟಿ ಮತ್ತು ಹಣದುಬ್ಬರ ವಿಚಾರಗಳಲ್ಲಿ ಕೇಂದ್ರವನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, “ನೀವು ಯುವಜನರಿಗೆ ಎಷ್ಟು ಉದ್ಯೋಗಗಳನ್ನು ಸೃಷ್ಠಿ ಮಾಡಿದ್ದೀರಿ ಎಂದು ಕೇಳಿದ್ದಾರೆ. ಔಷಧಿ, ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ಆದರೆ, ಕೇಂದ್ರ ಸರ್ಕಾರ ಸುಳ್ಳು ನಿರೂಪಣೆ ಮೂಲಕ ಬಂಗಾಳವನ್ನು ಗುರಿಯಾಗಿಸುವುದರಲ್ಲಿ ಬ್ಯುಸಿಯಾಗಿದೆ” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮುರ್ಶಿದಾಬಾದ್ ಗಲಭೆಗೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ “ಹಿಂದೂ ಸಮುದಾಯವನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳನ್ನು ಮಮತಾ ಸರ್ಕಾರ ಬೆಂಬಲಿಸುತ್ತಿದೆ” ಎಂದು ಆರೋಪಿಸಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...