Homeಮುಖಪುಟಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

ಪ.ಬಂಗಾಳ| ಮುರ್ಶಿದಾಬಾದ್ ಹಿಂಸಾಚಾರ ಪೂರ್ವ ಯೋಜಿತ: ಮಮತಾ ಬ್ಯಾನರ್ಜಿ

- Advertisement -
- Advertisement -

‘ಮುರ್ಶಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಪೂರ್ವ ಯೋಜಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಗಲಭೆ ಪರಿಸ್ಥಿತಿಯ ಕುರಿತು ಇಮಾರುಗಳೊಂದಿಗೆ ಸಭೆ ನಡೆಸಿದ ಸಿಎಂ, “ಹಿಂಸಾಚಾರದ ಹಿಂದೆ ಟಿಎಂಸಿ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸಿದೆ. ಅವರು ಹೇಳಿದಂತೆ ನಮ್ಮ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳ ಮೇಲೆ ದಾಳಿ ನಡೆಯುತ್ತಿರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ಸಂಸತ್ತಿನ ಟಿಎಂಸಿ ವಕ್ಫ್‌ (ತಿದ್ದುಪಡಿ) ಮಸೂದೆ ವಿರುದ್ದ ಬಲವಾದ ನಿಲುವು ವ್ಯಕ್ತಪಡಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ದದ ಹೋರಾಟದಲ್ಲಿ ಟಿಎಂಸಿ ಮುಂಚೂಣಿಯಲ್ಲಿದೆ” ಎಂದು ಹೇಳಿದ್ಧಾರೆ.

“ಮುರ್ಶಿದಾಬಾದ್ ಹಿಂಸಾಚಾರದಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ. ಇದು ಒಂದು ವೇಳೆ ನಿಜವಾಗಿದ್ದರೆ, ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರತು ರಾಜ್ಯವಲ್ಲ. ಗಡಿ ಕಾಯುತ್ತಿರುವುದು ಬಿಎಸ್‌ಎಫ್‌ ಹೊರತಯ ರಾಜ್ಯ ಸರ್ಕಾರವಲ್ಲ. ಹೊರಗಡೆಯಿಂದ ಬಿಜೆಪಿಯವರು ಬಂದು ಗಲಾಟೆ ಸೃಷ್ಟಿಸಿ ಓಡಿ ಹೋಗಲು ನೀವು ಅನುವು ಮಾಡಿ ಕೊಡುವುದು ಏಕೆ?” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ಕೆಲವು ಗೋದಿ ಮೀಡಿಯಾಗಳು ಬಂಗಾಳದ ಕುರಿತು ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ಅನ್ಯಾಯವಾಗಿ ಬಂಗಾಳವನ್ನು ಗುರಿಯಾಗಿಸಿಕೊಂಡಿವೆ. ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ, ಆದರೆ ಗೋದಿ ಮೀಡಿಯಾಗಳು ಪಶ್ಚಿಮ ಬಂಗಾಳ ಮತ್ತು ನನ್ನ ವಿರುದ್ದ ಮಾತನಾಡುತ್ತಿವೆ” ಎಂದ ಮಮತಾ ಬ್ಯಾನರ್ಜಿ, “ಟೀಕೆ ಮಾಡುವವರು ಸುಳ್ಳು ಸುದ್ದಿ ಹರಡಬೇಡಿ, ನನ್ನ ಜೊತೆ ನೇರವಾಗಿ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಪಶ್ಚಿಮ ಬಂಗಾಳವನ್ನು ಅವಹೇಳನ ಮಾಡಲು ಬಿಜೆಪಿ ಬೆಂಬಲಿತ ಮಾಧ್ಯಮಗಳು ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುತ್ತಿವೆ. ನಾವು ಅವರನ್ನು ಪತ್ತೆ ಹೆಚ್ಚಿದ್ದೇವೆ. ಒಟ್ಟು 8 ವಿಡಿಯೋಗಳಲ್ಲಿ ಕೆಲವು ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದ್ದು. ಬಂಗಾಳದ ಹೆಸರಿಗೆ ಮಸಿ ಬಳಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು” ಎಂದು ಮಮಥಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.

“ಉದ್ಯೋಗ ಸೃಷ್ಟಿ ಮತ್ತು ಹಣದುಬ್ಬರ ವಿಚಾರಗಳಲ್ಲಿ ಕೇಂದ್ರವನ್ನು ಪ್ರಶ್ನಿಸಿದ ಮಮತಾ ಬ್ಯಾನರ್ಜಿ, “ನೀವು ಯುವಜನರಿಗೆ ಎಷ್ಟು ಉದ್ಯೋಗಗಳನ್ನು ಸೃಷ್ಠಿ ಮಾಡಿದ್ದೀರಿ ಎಂದು ಕೇಳಿದ್ದಾರೆ. ಔಷಧಿ, ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ಆದರೆ, ಕೇಂದ್ರ ಸರ್ಕಾರ ಸುಳ್ಳು ನಿರೂಪಣೆ ಮೂಲಕ ಬಂಗಾಳವನ್ನು ಗುರಿಯಾಗಿಸುವುದರಲ್ಲಿ ಬ್ಯುಸಿಯಾಗಿದೆ” ಎಂದು ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಮುರ್ಶಿದಾಬಾದ್ ಗಲಭೆಗೆ ಸಂಬಂಧಿಸಿದಂತೆ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ “ಹಿಂದೂ ಸಮುದಾಯವನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಗಳನ್ನು ಮಮತಾ ಸರ್ಕಾರ ಬೆಂಬಲಿಸುತ್ತಿದೆ” ಎಂದು ಆರೋಪಿಸಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...