Homeಮುಖಪುಟಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು ನೀಡಿದೆ.

ಕೋಲ್ಕತ್ತಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಘೋಷಿಸಲಾದ ವಿಶಾಲವಾದ ಕಾನೂನು ಮತ್ತು ಸುವ್ಯವಸ್ಥೆ ಕೂಲಂಕುಷ ಪರೀಕ್ಷೆಯ ಭಾಗವಾಗಿ ಸಭೆ ನಡೆಸಲಾಗಿದೆ.

ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳನ್ನು ಮೀರಿ ಆಚೆ ಬರಬಾರದು; ವಿಶೇಷ ಸಂದರ್ಭಗಳಲ್ಲಿ ಹೊರತುಪಡಿಸಿ, ಸಾರ್ವಜನಿಕ ಅನಾನುಕೂಲತೆಯನ್ನು ತಪ್ಪಿಸುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳಲ್ಲಿಯೇ ಇರಬೇಕು, ಕಾನೂನುಬದ್ಧ ಶಬ್ದ ಮಿತಿಗಳನ್ನು ಅನುಸರಿಸಬೇಕು” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದರು.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅಧ್ಯಕ್ಷತೆಯಲ್ಲಿ, ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪ್ರಮುಖ ಸಭೆಯಲ್ಲಿ ನಿರ್ದೇಶನಗಳನ್ನು ನೀಡಲಾಯಿತು. ಸಭೆ ನಬನ್ನಾದಲ್ಲಿ ನಡೆದಿದ್ದು, ಡಿಜಿಪಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿಗಳು ಹಲವು ಇಲಾಖೆಗಳಿಗೆ ಸುಮಾರು ಒಂದು ಡಜನ್ ಸೂಚನೆಗಳನ್ನು ನೀಡಿದರು. ಅಕ್ರಮ ಕಲ್ಲಿದ್ದಲು ಗಣಿಗಾರಿಕೆ, ಮರಳು ಕಳ್ಳಸಾಗಣೆ, ಜಾನುವಾರು ಸಾಗಣೆ, ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಚುನಾವಣಾ ನಂತರದ ಹಿಂಸಾಚಾರ ಪ್ರಕರಣಗಳ ವಿರುದ್ಧ ಕಠಿಣ ಕ್ರಮಗಳು ಇದರಲ್ಲಿ ಸೇರಿವೆ.

“ಎಲ್ಲಾ ಪ್ರಕರಣಗಳಲ್ಲಿ ಕಾನೂನಿನ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪಕ್ಷಪಾತವಿಲ್ಲದೆ ವರ್ತಿಸಲು ಮುಖ್ಯಮಂತ್ರಿ ನಮಗೆ ಹೇಳಿದರು” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಸ್ತೆಬದಿಯ ಪ್ರಾರ್ಥನೆ ಮತ್ತು ಧ್ವನಿವರ್ಧಕಗಳ ಬಳಕೆಗೆ ನಿಷೇಧ

ಧಾರ್ಮಿಕ ಚಟುವಟಿಕೆಗಳಿಗಾಗಿ ರಸ್ತೆಗಳನ್ನು ನಿರ್ಬಂಧಿಸುವುದು, ಸಂಚಾರಕ್ಕೆ ಅಡ್ಡಿಯಾಗುವುದನ್ನು ತಡೆಯುವ ಪ್ರಮುಖ ನಿರ್ದೇಶನಗಳಾಗಿವೆ. ನಿಗದಿಪಡಿಸಿದ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆಗಳನ್ನು ನಡೆಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ನಮಾಜ್ ಅಥವಾ ಯಾವುದೇ ಧಾರ್ಮಿಕ ಸಭೆಗಾಗಿ ರಸ್ತೆಗಳನ್ನು ನಿರ್ಬಂಧಿಸಬಾರದು. ಮಸೀದಿಗಳು ಅಥವಾ ಗೊತ್ತುಪಡಿಸಿದ ಸ್ಥಳಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಮುಕ್ತರಾಗಿದ್ದಾರೆ. ಆದರೆ, ಸಾರ್ವಜನಿಕ ರಸ್ತೆಗಳನ್ನು ಅದಕ್ಕೆ ಬಳಸಲಾಗುವುದಿಲ್ಲ” ಎಂದು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಹೇಳಿದರು.

ಹಿಂದೆ ದೊಡ್ಡ ಸಭೆಗಳಿಗೆ ಸಾಕಷಿಯಾಗುತ್ತಿದ್ದ ರೆಡ್ ರೋಡ್ ಸೇರಿದಂತೆ ಕೋಲ್ಕತ್ತಾದ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗಳಿಗೆ ನಿರ್ಬಂಧಗಳು ಅನ್ವಯಿಸುತ್ತವೆ ಎಂದು ಅವರು ಹೇಳಿದರು.

ಕೆಲವು ಧಾರ್ಮಿಕ ವ್ಯಕ್ತಿಗಳು ಸರ್ಕಾರದ ಮಾರ್ಗಸೂಚಿಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ನಿಯಮಗಳನ್ನು ಎಲ್ಲಾ ಸಮುದಾಯಗಳಿಗೆ ನ್ಯಾಯಯುತವಾಗಿ ಅನ್ವಯಿಸಿದರೆ ನಾವೂ ಕೂಡ ಅನುಸರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

“ಅಂತಹ ಕ್ರಮಗಳನ್ನು ತೆಗೆದುಕೊಂಡರೆ, ಕಾನೂನು ಪಾಲಿಸುವ ನಾಗರಿಕರಾಗಿ ನಾವು ಸ್ವಾಗತಿಸುತ್ತೇವೆ. ಯಾವುದೇ ಧಾರ್ಮಿಕ ಕಾರ್ಯಕ್ರಮವು ರಸ್ತೆಗಳಿಗೆ ಅಡ್ಡಿಯಾಗಬಾರದು. ಕಾನೂನು ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು” ಎಂದು ನಖೋಡಾ ಮಸೀದಿಯ ಟ್ರಸ್ಟಿ ನಾಸಿರ್ ಇಬ್ರಾಹಿಂ ಹೇಳಿದರು.

ಸರ್ಬ ಭಾರತೀಯ ಪ್ರಾಚ್ಯ ಅಕಾಡೆಮಿಯ ಪ್ರಾಂಶುಪಾಲ ಜಯಂತ್ ಕುಶಾರಿ ಕೂಡ ಈ ಕ್ರಮವನ್ನು ಬೆಂಬಲಿಸಿದರು. ಧಾರ್ಮಿಕ ಆಚರಣೆಗಳು ನಾಗರಿಕ ಜವಾಬ್ದಾರಿಯೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದರು.

“ಪ್ರಾರ್ಥನೆಯು ವೈಯಕ್ತಿಕ ಮತ್ತು ಆಧ್ಯಾತ್ಮಿಕ ವಿಷಯವಾಗಿದೆ. ಯಾವುದೇ ಧರ್ಮವು ಧ್ವನಿವರ್ಧಕಗಳನ್ನು ಅತ್ಯಗತ್ಯವೆಂದು ಕಡ್ಡಾಯಗೊಳಿಸುವುದಿಲ್ಲ. ನಾಗರಿಕ ಜವಾಬ್ದಾರಿ ಮತ್ತು ಸಾರ್ವಜನಿಕ ಅನುಕೂಲವು ಮೊದಲು ಬರಬೇಕು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...