Homeಮುಖಪುಟಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು ನೀಡಿದೆ.

ಕೋಲ್ಕತ್ತಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಘೋಷಿಸಲಾದ ವಿಶಾಲವಾದ ಕಾನೂನು ಮತ್ತು ಸುವ್ಯವಸ್ಥೆ ಕೂಲಂಕುಷ ಪರೀಕ್ಷೆಯ ಭಾಗವಾಗಿ ಸಭೆ ನಡೆಸಲಾಗಿದೆ.

ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳನ್ನು ಮೀರಿ ಆಚೆ ಬರಬಾರದು; ವಿಶೇಷ ಸಂದರ್ಭಗಳಲ್ಲಿ ಹೊರತುಪಡಿಸಿ, ಸಾರ್ವಜನಿಕ ಅನಾನುಕೂಲತೆಯನ್ನು ತಪ್ಪಿಸುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಲೌಡ್‌ಸ್ಪೀಕರ್‌ಗಳಿಂದ ಬರುವ ಶಬ್ದವು ಧಾರ್ಮಿಕ ಆವರಣಗಳಲ್ಲಿಯೇ ಇರಬೇಕು, ಕಾನೂನುಬದ್ಧ ಶಬ್ದ ಮಿತಿಗಳನ್ನು ಅನುಸರಿಸಬೇಕು” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದರು.

ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅಧ್ಯಕ್ಷತೆಯಲ್ಲಿ, ಅವರು ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪ್ರಮುಖ ಸಭೆಯಲ್ಲಿ ನಿರ್ದೇಶನಗಳನ್ನು ನೀಡಲಾಯಿತು. ಸಭೆ ನಬನ್ನಾದಲ್ಲಿ ನಡೆದಿದ್ದು, ಡಿಜಿಪಿ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿಗಳು ಹಲವು ಇಲಾಖೆಗಳಿಗೆ ಸುಮಾರು ಒಂದು ಡಜನ್ ಸೂಚನೆಗಳನ್ನು ನೀಡಿದರು. ಅಕ್ರಮ ಕಲ್ಲಿದ್ದಲು ಗಣಿಗಾರಿಕೆ, ಮರಳು ಕಳ್ಳಸಾಗಣೆ, ಜಾನುವಾರು ಸಾಗಣೆ, ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಚುನಾವಣಾ ನಂತರದ ಹಿಂಸಾಚಾರ ಪ್ರಕರಣಗಳ ವಿರುದ್ಧ ಕಠಿಣ ಕ್ರಮಗಳು ಇದರಲ್ಲಿ ಸೇರಿವೆ.

“ಎಲ್ಲಾ ಪ್ರಕರಣಗಳಲ್ಲಿ ಕಾನೂನಿನ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪಕ್ಷಪಾತವಿಲ್ಲದೆ ವರ್ತಿಸಲು ಮುಖ್ಯಮಂತ್ರಿ ನಮಗೆ ಹೇಳಿದರು” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಸ್ತೆಬದಿಯ ಪ್ರಾರ್ಥನೆ ಮತ್ತು ಧ್ವನಿವರ್ಧಕಗಳ ಬಳಕೆಗೆ ನಿಷೇಧ

ಧಾರ್ಮಿಕ ಚಟುವಟಿಕೆಗಳಿಗಾಗಿ ರಸ್ತೆಗಳನ್ನು ನಿರ್ಬಂಧಿಸುವುದು, ಸಂಚಾರಕ್ಕೆ ಅಡ್ಡಿಯಾಗುವುದನ್ನು ತಡೆಯುವ ಪ್ರಮುಖ ನಿರ್ದೇಶನಗಳಾಗಿವೆ. ನಿಗದಿಪಡಿಸಿದ ಧಾರ್ಮಿಕ ಸ್ಥಳಗಳಲ್ಲಿ ಪ್ರಾರ್ಥನೆಗಳನ್ನು ನಡೆಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ನಮಾಜ್ ಅಥವಾ ಯಾವುದೇ ಧಾರ್ಮಿಕ ಸಭೆಗಾಗಿ ರಸ್ತೆಗಳನ್ನು ನಿರ್ಬಂಧಿಸಬಾರದು. ಮಸೀದಿಗಳು ಅಥವಾ ಗೊತ್ತುಪಡಿಸಿದ ಸ್ಥಳಗಳಲ್ಲಿ ಜನರು ಪ್ರಾರ್ಥನೆ ಸಲ್ಲಿಸಲು ಮುಕ್ತರಾಗಿದ್ದಾರೆ. ಆದರೆ, ಸಾರ್ವಜನಿಕ ರಸ್ತೆಗಳನ್ನು ಅದಕ್ಕೆ ಬಳಸಲಾಗುವುದಿಲ್ಲ” ಎಂದು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಹೇಳಿದರು.

ಹಿಂದೆ ದೊಡ್ಡ ಸಭೆಗಳಿಗೆ ಸಾಕಷಿಯಾಗುತ್ತಿದ್ದ ರೆಡ್ ರೋಡ್ ಸೇರಿದಂತೆ ಕೋಲ್ಕತ್ತಾದ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗಳಿಗೆ ನಿರ್ಬಂಧಗಳು ಅನ್ವಯಿಸುತ್ತವೆ ಎಂದು ಅವರು ಹೇಳಿದರು.

ಕೆಲವು ಧಾರ್ಮಿಕ ವ್ಯಕ್ತಿಗಳು ಸರ್ಕಾರದ ಮಾರ್ಗಸೂಚಿಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ನಿಯಮಗಳನ್ನು ಎಲ್ಲಾ ಸಮುದಾಯಗಳಿಗೆ ನ್ಯಾಯಯುತವಾಗಿ ಅನ್ವಯಿಸಿದರೆ ನಾವೂ ಕೂಡ ಅನುಸರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

“ಅಂತಹ ಕ್ರಮಗಳನ್ನು ತೆಗೆದುಕೊಂಡರೆ, ಕಾನೂನು ಪಾಲಿಸುವ ನಾಗರಿಕರಾಗಿ ನಾವು ಸ್ವಾಗತಿಸುತ್ತೇವೆ. ಯಾವುದೇ ಧಾರ್ಮಿಕ ಕಾರ್ಯಕ್ರಮವು ರಸ್ತೆಗಳಿಗೆ ಅಡ್ಡಿಯಾಗಬಾರದು. ಕಾನೂನು ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು” ಎಂದು ನಖೋಡಾ ಮಸೀದಿಯ ಟ್ರಸ್ಟಿ ನಾಸಿರ್ ಇಬ್ರಾಹಿಂ ಹೇಳಿದರು.

ಸರ್ಬ ಭಾರತೀಯ ಪ್ರಾಚ್ಯ ಅಕಾಡೆಮಿಯ ಪ್ರಾಂಶುಪಾಲ ಜಯಂತ್ ಕುಶಾರಿ ಕೂಡ ಈ ಕ್ರಮವನ್ನು ಬೆಂಬಲಿಸಿದರು. ಧಾರ್ಮಿಕ ಆಚರಣೆಗಳು ನಾಗರಿಕ ಜವಾಬ್ದಾರಿಯೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದರು.

“ಪ್ರಾರ್ಥನೆಯು ವೈಯಕ್ತಿಕ ಮತ್ತು ಆಧ್ಯಾತ್ಮಿಕ ವಿಷಯವಾಗಿದೆ. ಯಾವುದೇ ಧರ್ಮವು ಧ್ವನಿವರ್ಧಕಗಳನ್ನು ಅತ್ಯಗತ್ಯವೆಂದು ಕಡ್ಡಾಯಗೊಳಿಸುವುದಿಲ್ಲ. ನಾಗರಿಕ ಜವಾಬ್ದಾರಿ ಮತ್ತು ಸಾರ್ವಜನಿಕ ಅನುಕೂಲವು ಮೊದಲು ಬರಬೇಕು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...