Homeಮುಖಪುಟಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿ ಸ್ಥಗಿತ | ಸಂಸತ್ತಿನಲ್ಲಿ ವಾಗ್ವಾದ

ಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿ ಸ್ಥಗಿತ | ಸಂಸತ್ತಿನಲ್ಲಿ ವಾಗ್ವಾದ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ನರೇಗಾ ನಿಧಿಯನ್ನು ನಿಲ್ಲಿಸುವ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ತೃಣಮೂಲ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಆಡಳಿತ ಪಕ್ಷದ ಸದಸ್ಯರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ನರೇಗಾ ಯೋಜನೆಯ ಪ್ರಯೋಜನಗಳನ್ನು ಪಶ್ಚಿಮ ಬಂಗಾಳಕ್ಕೆ ವರ್ಗಾಯಿಸಲಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

“25 ಲಕ್ಷ ವಂಚನೆ ಪ್ರಕರಣಗಳು ಪತ್ತೆಯಾಗಿವೆ ಎಂದು ಸಚಿವಾಲಯದ ನಿರಂತರ ಹೇಳುತ್ತಿದೆ. ಇದರ ಬಗ್ಗೆ ನೀವು ತಕ್ಷಣ ಕ್ರಮ ಕೈಗೊಳ್ಳಿ, ತನಿಖೆ ಮಾಡಿ, ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಿ ಮತ್ತು ಬಂಧಿಸಿ ಎಂದು ನಾವು ಹೇಳುತ್ತಿದ್ದೇವೆ. ಅದಾಗ್ಯೂ, 25 ಲಕ್ಷ ಪ್ರಕರಣಗಳ ಕಾರಣಕ್ಕಾಗಿ 10 ಕೋಟಿ ಜನರಿಗೆ ಹಣವನ್ನು ನಿಲ್ಲಿಸುವುದು ಸರಿಯಲ್ಲ. ಯೋಜನೆಯಲ್ಲಿ ಭ್ರಷ್ಟಾಚಾರವಿದೆ ಎಂದಾದರೆ, ನೀವು ಏಕೆ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೂ ದಾಳಿ ನಡೆಸಿದ ಕಲ್ಯಾಣ್ ಬ್ಯಾನರ್ಜಿ, “ನೀವು ಕೇಂದ್ರ ಸರ್ಕಾರದ ಸಚಿವರಾಗಿದ್ದು ಈ ರೀತಿ ವರ್ತಿಸುತ್ತಿರುವುದು ಸರಿಯೆ… ನಿಮ್ಮನ್ನು ಸಚಿವರನ್ನಾಗಿ ಮಾಡಿದವರು ಯಾರು?” ಎಂದು ಕೇಳಿದ್ದಾರೆ. ಕಲ್ಯಾಣ್ ಬ್ಯಾನರ್ಜಿ ಅವರ ಈ ಹೇಳಿಕೆಗಳು ಆಡಳಿತರೂಢ ಸದಸ್ಯರಲ್ಲಿ ಆಕ್ರೋಶ ಉಂಟು ಮಾಡಿದ್ದು, ಅವರು ಅವರ ಹೇಳಿಕೆಗಳನ್ನು ಆಕ್ಷೇಪಿಸಿದ್ದಾರೆ.

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕಲ್ಯಾಣ್ ಬ್ಯಾನರ್ಜಿಅವರು ಬಳಸಿದ ಭಾಷೆಯನ್ನು ಆಕ್ಷೇಪಿಸಿದ್ದಾರೆ. ಈ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯ ಪ್ರವೇಶಿಸಿ ಸದಸ್ಯರು ತಮ್ಮೊಳಗೆ ಮಾತನಾಡುವ ಬದಲು ಸ್ಪೀಕರ್‌ ಪೀಠವನ್ನು ಉದ್ದೇಶಿಸಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. “ನಿಮ್ಮ ಮಾತುಗಳನ್ನು ಬುದ್ಧಿವಂತಿಕೆಯಿಂದ ಬಳಸಿ, ಯಾರಾದರೂ ಅನಧಿಕೃತವಾಗಿ ಏನಾದರೂ ಹೇಳಿದರೆ, ಅದಕ್ಕೆ ಪ್ರತಿಕ್ರಿಯಿಸಬೇಡಿ” ಎಂದು ಓಂ ಬಿರ್ಲಾ ಹೇಳಿದ್ದಾರೆ.

2025-26ರ ಕೇಂದ್ರ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂದೆ ನರೇಗಾದ 25 ಲಕ್ಷ ನಕಲಿ ಉದ್ಯೋಗ ಕಾರ್ಡ್‌ಗಳನ್ನು ಟಿಎಂಸಿ ಕಾರ್ಯಕರ್ತರು “ಲೂಟಿ” ಮಾಡಿದ್ದಾರೆ ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...