HomeUncategorizedಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

ಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

- Advertisement -
- Advertisement -

ಹಿಂಸಾಚಾರ ಮತ್ತು ಮತಯಂತ್ರಗಳನ್ನು ಒಡೆದುಹಾಕಿದ ಆರೋಪದಡಿ ಮರು ಮತದಾನಕ್ಕೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮುಂದಾಗಿದ್ದು, ರಾಜ್ಯಾದ್ಯಂತ 696 ಬೂತ್‌ಗಳಲ್ಲಿ ಸೋಮವಾರ ಬೆಳಿಗ್ಗೆ ಪಂಚಾಯತ್ ಚುನಾವಣೆಗಳಿಗೆ ಮರುಮತದಾನ ಪ್ರಾರಂಭವಾಗಿದೆ.

ಜುಲೈ 8ರಂದು ನಡೆದ ಪಂಚಾಯತ್ ಚುನಾವಣೆಗಳಲ್ಲಿ ವ್ಯಾಪಕ ಹಿಂಸಾಚಾರದಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತದಾರರನ್ನು ಬೆದರಿಸಿದ ಘಟನೆಗಳೂ ವರದಿಯಾಗಿವೆ.

ಹಿಂಸಾಚಾರ ಮತ್ತು ಮತಪೆಟ್ಟಿಗೆಗಳು ಮತ್ತು ಮತಯಂತ್ರಗಳನ್ನು ಧ್ವಂಸ ಪ್ರಕರಣಗಳು ವರದಿಯಾದ್ದರಿಂದ 19 ಜಿಲ್ಲೆಗಳ 696 ಬೂತ್‌ಗಳಲ್ಲಿ ಮರು ಮತದಾನ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ (175), ನಂತರದ ಸ್ಥಾನದಲ್ಲಿ ಮಾಲ್ಡಾ (109). ನಾಡಿಯಾದಲ್ಲಿ 89, ಕೂಚ್ ಬೆಹಾರ್‌ನಲ್ಲಿ 46, ಉತ್ತರ 24 ಪರಗಣಗಳಲ್ಲಿ 46, ಉತ್ತರ ದಿನಜ್‌ಪುರದಲ್ಲಿ 42, ದಕ್ಷಿಣ 24 ಪರಗಣಗಳಲ್ಲಿ 36, ಪುರ್ಬಾ ಮೇದಿನಿಪುರದಲ್ಲಿ 31 ಮತ್ತು ಹೂಗ್ಲಿಯಲ್ಲಿ 29 ಬೂತ್‌ಗಳಲ್ಲಿ ಮರುಮತದಾನ ನಡೆಯುತ್ತಿದೆ. ಡಾರ್ಜಿಲಿಂಗ್, ಜಾ‌ಗ್ರಾಮ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಲಾಗಿಲ್ಲ.

ಇಂದು ಬೆಳಿಗ್ಗೆ 7 ಗಂಟೆಯಿಂದ ಮರು ಮತದಾನ ಆರಂಭಗೊಂಡಿದ್ದು, ಎಲ್ಲ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕೇಂದ್ರ ಪಡೆಯ ನಾಲ್ವರು ಸಿಬ್ಬಂದಿ ಸೇರಿದಂತೆ ರಾಜ್ಯ ಪೊಲೀಸರನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಸಂಜೆ ಐದು ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಪಂಚಾಯತ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯಲ್ಲಿ ಅಂತಿಮ ಮತದಾನವು 81% ಆಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪುರ್ಬಾ ಮೇದಿನಿಪುರ್ ಜಿಲ್ಲೆಯಲ್ಲಿ (84.7%), ಬಿರ್ಭುಮ್ (83.1%) ಮತ್ತು ಬಂಕುರಾ (83%) ನಲ್ಲಿ ಅತಿ ಹೆಚ್ಚು ಮತದಾನವಾಗಿದೆ.

ಹತ್ಯೆಗೀಡಾದ 15 ಜನರಲ್ಲಿ 10 ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷದವರು. ಬಿಜೆಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್‌ನಿಂದ ತಲಾ ಒಬ್ಬ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಬೆಂಬಲಿಗರೂ ಸೇರಿದ್ದಾರೆ.

ವಿರೋಧ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಹಿಂಸಾಚಾರ ನಡೆಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಮುಂದಾಗಿವೆ ಎಂದು ಟಿಎಂಸಿ ಆರೋಪಿಸಿದೆ.

”ಇಡೀ ಚುನಾವಣಾ ಪ್ರಕ್ರಿಯೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ, ಆದರೆ ಬಹುಮಟ್ಟಿಗೆ ಶಾಂತಿಯುತ ಮತ್ತು ನ್ಯಾಯಯುತ ಚುನಾವಣೆಯ ಶ್ರೇಯಸ್ಸು ಸಾರ್ವಜನಿಕರಿಗೆ ಸಲ್ಲುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

”ಹೆಚ್ಚಿನ ಸಾವುಗಳು ತೃಣಮೂಲ ಕಾರ್ಯಕರ್ತರದ್ದಾಗಿವೆ, ತೃಣಮೂಲ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದರೆ, ಅವರು ತಮ್ಮ ಸ್ವಂತ ಕಾರ್ಯಕರ್ತರನ್ನು ಏಕೆ ಗುರಿಯಾಗಿಸುತ್ತಾರೆ?” ಎಂದು ಘೋಷ್‌ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣಾ ಹಿಂಸಾಚಾರ: ಸೂಕ್ಷ್ಮ ಮತಗಟ್ಟೆಗಳ ಕುರಿತು ಆಯೋಗ ಮಾಹಿತಿ ನೀಡಿಲ್ಲ; ಬಿಎಸ್‌ಎಫ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...