HomeUncategorizedಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

ಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

- Advertisement -
- Advertisement -

ಹಿಂಸಾಚಾರ ಮತ್ತು ಮತಯಂತ್ರಗಳನ್ನು ಒಡೆದುಹಾಕಿದ ಆರೋಪದಡಿ ಮರು ಮತದಾನಕ್ಕೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮುಂದಾಗಿದ್ದು, ರಾಜ್ಯಾದ್ಯಂತ 696 ಬೂತ್‌ಗಳಲ್ಲಿ ಸೋಮವಾರ ಬೆಳಿಗ್ಗೆ ಪಂಚಾಯತ್ ಚುನಾವಣೆಗಳಿಗೆ ಮರುಮತದಾನ ಪ್ರಾರಂಭವಾಗಿದೆ.

ಜುಲೈ 8ರಂದು ನಡೆದ ಪಂಚಾಯತ್ ಚುನಾವಣೆಗಳಲ್ಲಿ ವ್ಯಾಪಕ ಹಿಂಸಾಚಾರದಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತದಾರರನ್ನು ಬೆದರಿಸಿದ ಘಟನೆಗಳೂ ವರದಿಯಾಗಿವೆ.

ಹಿಂಸಾಚಾರ ಮತ್ತು ಮತಪೆಟ್ಟಿಗೆಗಳು ಮತ್ತು ಮತಯಂತ್ರಗಳನ್ನು ಧ್ವಂಸ ಪ್ರಕರಣಗಳು ವರದಿಯಾದ್ದರಿಂದ 19 ಜಿಲ್ಲೆಗಳ 696 ಬೂತ್‌ಗಳಲ್ಲಿ ಮರು ಮತದಾನ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ (175), ನಂತರದ ಸ್ಥಾನದಲ್ಲಿ ಮಾಲ್ಡಾ (109). ನಾಡಿಯಾದಲ್ಲಿ 89, ಕೂಚ್ ಬೆಹಾರ್‌ನಲ್ಲಿ 46, ಉತ್ತರ 24 ಪರಗಣಗಳಲ್ಲಿ 46, ಉತ್ತರ ದಿನಜ್‌ಪುರದಲ್ಲಿ 42, ದಕ್ಷಿಣ 24 ಪರಗಣಗಳಲ್ಲಿ 36, ಪುರ್ಬಾ ಮೇದಿನಿಪುರದಲ್ಲಿ 31 ಮತ್ತು ಹೂಗ್ಲಿಯಲ್ಲಿ 29 ಬೂತ್‌ಗಳಲ್ಲಿ ಮರುಮತದಾನ ನಡೆಯುತ್ತಿದೆ. ಡಾರ್ಜಿಲಿಂಗ್, ಜಾ‌ಗ್ರಾಮ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಲಾಗಿಲ್ಲ.

ಇಂದು ಬೆಳಿಗ್ಗೆ 7 ಗಂಟೆಯಿಂದ ಮರು ಮತದಾನ ಆರಂಭಗೊಂಡಿದ್ದು, ಎಲ್ಲ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕೇಂದ್ರ ಪಡೆಯ ನಾಲ್ವರು ಸಿಬ್ಬಂದಿ ಸೇರಿದಂತೆ ರಾಜ್ಯ ಪೊಲೀಸರನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಸಂಜೆ ಐದು ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಪಂಚಾಯತ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯಲ್ಲಿ ಅಂತಿಮ ಮತದಾನವು 81% ಆಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪುರ್ಬಾ ಮೇದಿನಿಪುರ್ ಜಿಲ್ಲೆಯಲ್ಲಿ (84.7%), ಬಿರ್ಭುಮ್ (83.1%) ಮತ್ತು ಬಂಕುರಾ (83%) ನಲ್ಲಿ ಅತಿ ಹೆಚ್ಚು ಮತದಾನವಾಗಿದೆ.

ಹತ್ಯೆಗೀಡಾದ 15 ಜನರಲ್ಲಿ 10 ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷದವರು. ಬಿಜೆಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್‌ನಿಂದ ತಲಾ ಒಬ್ಬ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಬೆಂಬಲಿಗರೂ ಸೇರಿದ್ದಾರೆ.

ವಿರೋಧ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಹಿಂಸಾಚಾರ ನಡೆಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಮುಂದಾಗಿವೆ ಎಂದು ಟಿಎಂಸಿ ಆರೋಪಿಸಿದೆ.

”ಇಡೀ ಚುನಾವಣಾ ಪ್ರಕ್ರಿಯೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ, ಆದರೆ ಬಹುಮಟ್ಟಿಗೆ ಶಾಂತಿಯುತ ಮತ್ತು ನ್ಯಾಯಯುತ ಚುನಾವಣೆಯ ಶ್ರೇಯಸ್ಸು ಸಾರ್ವಜನಿಕರಿಗೆ ಸಲ್ಲುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

”ಹೆಚ್ಚಿನ ಸಾವುಗಳು ತೃಣಮೂಲ ಕಾರ್ಯಕರ್ತರದ್ದಾಗಿವೆ, ತೃಣಮೂಲ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದರೆ, ಅವರು ತಮ್ಮ ಸ್ವಂತ ಕಾರ್ಯಕರ್ತರನ್ನು ಏಕೆ ಗುರಿಯಾಗಿಸುತ್ತಾರೆ?” ಎಂದು ಘೋಷ್‌ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣಾ ಹಿಂಸಾಚಾರ: ಸೂಕ್ಷ್ಮ ಮತಗಟ್ಟೆಗಳ ಕುರಿತು ಆಯೋಗ ಮಾಹಿತಿ ನೀಡಿಲ್ಲ; ಬಿಎಸ್‌ಎಫ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...