HomeUncategorizedಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

ಪ. ಬಂಗಾಳ ಪಂಚಾಯತ್ ಚುನಾವಣೆ: ಹಿಂಸಾಚಾರ ಹಿನ್ನೆಲೆ 696 ಬೂತ್‌ಗಳಲ್ಲಿ ಮರು ಮತದಾನ

- Advertisement -
- Advertisement -

ಹಿಂಸಾಚಾರ ಮತ್ತು ಮತಯಂತ್ರಗಳನ್ನು ಒಡೆದುಹಾಕಿದ ಆರೋಪದಡಿ ಮರು ಮತದಾನಕ್ಕೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮುಂದಾಗಿದ್ದು, ರಾಜ್ಯಾದ್ಯಂತ 696 ಬೂತ್‌ಗಳಲ್ಲಿ ಸೋಮವಾರ ಬೆಳಿಗ್ಗೆ ಪಂಚಾಯತ್ ಚುನಾವಣೆಗಳಿಗೆ ಮರುಮತದಾನ ಪ್ರಾರಂಭವಾಗಿದೆ.

ಜುಲೈ 8ರಂದು ನಡೆದ ಪಂಚಾಯತ್ ಚುನಾವಣೆಗಳಲ್ಲಿ ವ್ಯಾಪಕ ಹಿಂಸಾಚಾರದಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ರಾಜ್ಯದ ಕೆಲವೆಡೆ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತದಾರರನ್ನು ಬೆದರಿಸಿದ ಘಟನೆಗಳೂ ವರದಿಯಾಗಿವೆ.

ಹಿಂಸಾಚಾರ ಮತ್ತು ಮತಪೆಟ್ಟಿಗೆಗಳು ಮತ್ತು ಮತಯಂತ್ರಗಳನ್ನು ಧ್ವಂಸ ಪ್ರಕರಣಗಳು ವರದಿಯಾದ್ದರಿಂದ 19 ಜಿಲ್ಲೆಗಳ 696 ಬೂತ್‌ಗಳಲ್ಲಿ ಮರು ಮತದಾನ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅತಿ ಹೆಚ್ಚು ಸಂಖ್ಯೆಯಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ (175), ನಂತರದ ಸ್ಥಾನದಲ್ಲಿ ಮಾಲ್ಡಾ (109). ನಾಡಿಯಾದಲ್ಲಿ 89, ಕೂಚ್ ಬೆಹಾರ್‌ನಲ್ಲಿ 46, ಉತ್ತರ 24 ಪರಗಣಗಳಲ್ಲಿ 46, ಉತ್ತರ ದಿನಜ್‌ಪುರದಲ್ಲಿ 42, ದಕ್ಷಿಣ 24 ಪರಗಣಗಳಲ್ಲಿ 36, ಪುರ್ಬಾ ಮೇದಿನಿಪುರದಲ್ಲಿ 31 ಮತ್ತು ಹೂಗ್ಲಿಯಲ್ಲಿ 29 ಬೂತ್‌ಗಳಲ್ಲಿ ಮರುಮತದಾನ ನಡೆಯುತ್ತಿದೆ. ಡಾರ್ಜಿಲಿಂಗ್, ಜಾ‌ಗ್ರಾಮ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಲಾಗಿಲ್ಲ.

ಇಂದು ಬೆಳಿಗ್ಗೆ 7 ಗಂಟೆಯಿಂದ ಮರು ಮತದಾನ ಆರಂಭಗೊಂಡಿದ್ದು, ಎಲ್ಲ ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕೇಂದ್ರ ಪಡೆಯ ನಾಲ್ವರು ಸಿಬ್ಬಂದಿ ಸೇರಿದಂತೆ ರಾಜ್ಯ ಪೊಲೀಸರನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ. ಸಂಜೆ ಐದು ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಪಂಚಾಯತ್ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯಲ್ಲಿ ಅಂತಿಮ ಮತದಾನವು 81% ಆಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪುರ್ಬಾ ಮೇದಿನಿಪುರ್ ಜಿಲ್ಲೆಯಲ್ಲಿ (84.7%), ಬಿರ್ಭುಮ್ (83.1%) ಮತ್ತು ಬಂಕುರಾ (83%) ನಲ್ಲಿ ಅತಿ ಹೆಚ್ಚು ಮತದಾನವಾಗಿದೆ.

ಹತ್ಯೆಗೀಡಾದ 15 ಜನರಲ್ಲಿ 10 ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷದವರು. ಬಿಜೆಪಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ಮತ್ತು ಇಂಡಿಯನ್ ಸೆಕ್ಯುಲರ್ ಫ್ರಂಟ್‌ನಿಂದ ತಲಾ ಒಬ್ಬ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಬೆಂಬಲಿಗರೂ ಸೇರಿದ್ದಾರೆ.

ವಿರೋಧ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಹಿಂಸಾಚಾರ ನಡೆಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಮುಂದಾಗಿವೆ ಎಂದು ಟಿಎಂಸಿ ಆರೋಪಿಸಿದೆ.

”ಇಡೀ ಚುನಾವಣಾ ಪ್ರಕ್ರಿಯೆಯನ್ನು ಹಿಂಸಾತ್ಮಕವಾಗಿ ಚಿತ್ರಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ, ಆದರೆ ಬಹುಮಟ್ಟಿಗೆ ಶಾಂತಿಯುತ ಮತ್ತು ನ್ಯಾಯಯುತ ಚುನಾವಣೆಯ ಶ್ರೇಯಸ್ಸು ಸಾರ್ವಜನಿಕರಿಗೆ ಸಲ್ಲುತ್ತದೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

”ಹೆಚ್ಚಿನ ಸಾವುಗಳು ತೃಣಮೂಲ ಕಾರ್ಯಕರ್ತರದ್ದಾಗಿವೆ, ತೃಣಮೂಲ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದರೆ, ಅವರು ತಮ್ಮ ಸ್ವಂತ ಕಾರ್ಯಕರ್ತರನ್ನು ಏಕೆ ಗುರಿಯಾಗಿಸುತ್ತಾರೆ?” ಎಂದು ಘೋಷ್‌ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣಾ ಹಿಂಸಾಚಾರ: ಸೂಕ್ಷ್ಮ ಮತಗಟ್ಟೆಗಳ ಕುರಿತು ಆಯೋಗ ಮಾಹಿತಿ ನೀಡಿಲ್ಲ; ಬಿಎಸ್‌ಎಫ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...