Homeಮುಖಪುಟಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

'ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ'- ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪೂರಕ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರೈತರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಯುವಕರಿಗಾಗಿಯೇ ‘ತರುಣರ ಸ್ವಪ್ನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಹೊಸ ಯೋಜನೆಗಳು ಏಪ್ರಿಲ್ ತಿಂಗಳ ನಂತರ ಜಾರಿಗೆ ಬರಲಿವೆ.

2.99 ಲಕ್ಷ ಕೋಟಿ ಮೊತ್ತ ಪೂರಕ ಬಜೆಟ್ ಮಂಡಿಸಿರುವ ಮಮತ ಬಜೆಟ್ ಅನ್ನು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರಭೋಷ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಸುಭಾಷ್ ಚಂದ್ರರ ಮಾತುಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಉಲ್ಲೇಖಿಸಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಸುಭಾಷ್ ಮಾತುಗಳಲ್ಲೇ ಹೇಳುವುದಾದರೆ ‘ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ’ ಸುಭಾಷ್ ಚಂದ್ರ ಭೋಸರ 125ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ನೆನಪು ಸದಾ ಉಳಿಯುವಂತೆ ಮಾಡಬೇಕಾಗಿದೆ. ಅದಕ್ಕಾಗಿ ನಾನು ರಾಜ್ಯದ ಜನರ ಮುಂದೆ ಹೇಳುತ್ತಿದ್ದೇನೆ. ‘ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಸುಭಾಷ್ ಚಂದ್ರಭೋಸರ ನೆನಪು ಸದಾ ಉಳಿಯುವಂತಾಗಲು ಸ್ಮಾರಕ ನಿರ್ಮಾಣ ಮಾಡಬೇಕು. ಅದಕ್ಕಾಗಿ ‘ತರುಣರ ಕನಸು’ ಯೋಜನೆ ರೂಪಿಸುತ್ತಿದ್ದೇನೆ. ಅಷ್ಟೇ ಅಲ್ಲ ರಾಜ್ಯ ಯೋಜನಾ ಆಯೋಗವನ್ನು ಮರು ರಚನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಜೈಹಿಂದ್ ಭವನ ನಿರ್ಮಾಣ ಮಾಡುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 20 ಲಕ್ಷ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು. ಇದಕ್ಕಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.

ಅನುದಾನರಹಿತ ಮದ್ರಸಾಗಳನ್ನು ಅನುದಾನಿತಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ ಅವರು, ಟೀ ಗಾರ್ಡನ್ ಪ್ರದೇಶದಲ್ಲಿ 100 ಹೊಸ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು, ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ 100 ಹೊಸ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು 300 ಪ್ಯಾರಾ ಶಿಕ್ಷಕರನ್ನು ನೇಮಕ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ‘ಭವ್ಯ’ ಅವಮಾನ! -ಬೃಂದಾ ಕಾರಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...