Homeಮುಖಪುಟಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

'ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ'- ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪೂರಕ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರೈತರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಯುವಕರಿಗಾಗಿಯೇ ‘ತರುಣರ ಸ್ವಪ್ನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಹೊಸ ಯೋಜನೆಗಳು ಏಪ್ರಿಲ್ ತಿಂಗಳ ನಂತರ ಜಾರಿಗೆ ಬರಲಿವೆ.

2.99 ಲಕ್ಷ ಕೋಟಿ ಮೊತ್ತ ಪೂರಕ ಬಜೆಟ್ ಮಂಡಿಸಿರುವ ಮಮತ ಬಜೆಟ್ ಅನ್ನು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರಭೋಷ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಸುಭಾಷ್ ಚಂದ್ರರ ಮಾತುಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಉಲ್ಲೇಖಿಸಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಸುಭಾಷ್ ಮಾತುಗಳಲ್ಲೇ ಹೇಳುವುದಾದರೆ ‘ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ’ ಸುಭಾಷ್ ಚಂದ್ರ ಭೋಸರ 125ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ನೆನಪು ಸದಾ ಉಳಿಯುವಂತೆ ಮಾಡಬೇಕಾಗಿದೆ. ಅದಕ್ಕಾಗಿ ನಾನು ರಾಜ್ಯದ ಜನರ ಮುಂದೆ ಹೇಳುತ್ತಿದ್ದೇನೆ. ‘ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಸುಭಾಷ್ ಚಂದ್ರಭೋಸರ ನೆನಪು ಸದಾ ಉಳಿಯುವಂತಾಗಲು ಸ್ಮಾರಕ ನಿರ್ಮಾಣ ಮಾಡಬೇಕು. ಅದಕ್ಕಾಗಿ ‘ತರುಣರ ಕನಸು’ ಯೋಜನೆ ರೂಪಿಸುತ್ತಿದ್ದೇನೆ. ಅಷ್ಟೇ ಅಲ್ಲ ರಾಜ್ಯ ಯೋಜನಾ ಆಯೋಗವನ್ನು ಮರು ರಚನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಜೈಹಿಂದ್ ಭವನ ನಿರ್ಮಾಣ ಮಾಡುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 20 ಲಕ್ಷ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು. ಇದಕ್ಕಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.

ಅನುದಾನರಹಿತ ಮದ್ರಸಾಗಳನ್ನು ಅನುದಾನಿತಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ ಅವರು, ಟೀ ಗಾರ್ಡನ್ ಪ್ರದೇಶದಲ್ಲಿ 100 ಹೊಸ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು, ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ 100 ಹೊಸ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು 300 ಪ್ಯಾರಾ ಶಿಕ್ಷಕರನ್ನು ನೇಮಕ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ‘ಭವ್ಯ’ ಅವಮಾನ! -ಬೃಂದಾ ಕಾರಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...