Homeಮುಖಪುಟಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

ಪಶ್ಚಿಮಬಂಗಾಳ ಚುನಾವಣೆ: ಪೂರಕ ಬಜೆಟ್‌ನಲ್ಲಿ ರೈತರ ಸಬಲೀಕರಣಕ್ಕೆ ಒತ್ತು ನೀಡಿದ ಮಮತಾ

'ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ'- ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪೂರಕ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ರೈತರ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಯುವಕರಿಗಾಗಿಯೇ ‘ತರುಣರ ಸ್ವಪ್ನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಹೊಸ ಯೋಜನೆಗಳು ಏಪ್ರಿಲ್ ತಿಂಗಳ ನಂತರ ಜಾರಿಗೆ ಬರಲಿವೆ.

2.99 ಲಕ್ಷ ಕೋಟಿ ಮೊತ್ತ ಪೂರಕ ಬಜೆಟ್ ಮಂಡಿಸಿರುವ ಮಮತ ಬಜೆಟ್ ಅನ್ನು ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರಭೋಷ್ ಅವರಿಗೆ ಅರ್ಪಣೆ ಮಾಡಿದ್ದಾರೆ. ಸುಭಾಷ್ ಚಂದ್ರರ ಮಾತುಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಉಲ್ಲೇಖಿಸಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಸುಭಾಷ್ ಮಾತುಗಳಲ್ಲೇ ಹೇಳುವುದಾದರೆ ‘ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ’ ಸುಭಾಷ್ ಚಂದ್ರ ಭೋಸರ 125ನೇ ವರ್ಷಾಚರಣೆ ಸಂದರ್ಭದಲ್ಲಿ ಅವರ ನೆನಪು ಸದಾ ಉಳಿಯುವಂತೆ ಮಾಡಬೇಕಾಗಿದೆ. ಅದಕ್ಕಾಗಿ ನಾನು ರಾಜ್ಯದ ಜನರ ಮುಂದೆ ಹೇಳುತ್ತಿದ್ದೇನೆ. ‘ನನ್ನ ಮೇಲೆ ವಿಶ್ವಾಸವಿಡಿ, ನಾನು ನಿಮಗೆ ಅನಿರ್ಬಂಧಿತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತೇನೆ. ಇದಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದಳಿದ್ದೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಸುಭಾಷ್ ಚಂದ್ರಭೋಸರ ನೆನಪು ಸದಾ ಉಳಿಯುವಂತಾಗಲು ಸ್ಮಾರಕ ನಿರ್ಮಾಣ ಮಾಡಬೇಕು. ಅದಕ್ಕಾಗಿ ‘ತರುಣರ ಕನಸು’ ಯೋಜನೆ ರೂಪಿಸುತ್ತಿದ್ದೇನೆ. ಅಷ್ಟೇ ಅಲ್ಲ ರಾಜ್ಯ ಯೋಜನಾ ಆಯೋಗವನ್ನು ಮರು ರಚನೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಜೈಹಿಂದ್ ಭವನ ನಿರ್ಮಾಣ ಮಾಡುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರಿಗೆ 20 ಲಕ್ಷ ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಉನ್ನತೀಕರಣ ಮಾಡಲಾಗುವುದು. ಇದಕ್ಕಾಗಿ 1500 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದರು.

ಅನುದಾನರಹಿತ ಮದ್ರಸಾಗಳನ್ನು ಅನುದಾನಿತಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ ಅವರು, ಟೀ ಗಾರ್ಡನ್ ಪ್ರದೇಶದಲ್ಲಿ 100 ಹೊಸ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು, ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗಳಲ್ಲಿ 100 ಹೊಸ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು 300 ಪ್ಯಾರಾ ಶಿಕ್ಷಕರನ್ನು ನೇಮಕ ಮಾಡುವ ಗುರಿ ಇದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ‘ಭವ್ಯ’ ಅವಮಾನ! -ಬೃಂದಾ ಕಾರಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...