Homeಮುಖಪುಟಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವ ಮುನ್ನ ಕ್ರಿಕೆಟಿಗ ಮನೋಜ್ ತಿವಾರಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹೂಗ್ಲಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ರ್ಯಾಲಿಯಲ್ಲಿ ಮನೋಜ್ ತಿವಾರಿ ಅಧಿಕೃತವಾಗಿ ಟಿಎಂಸಿಗೆ ಸೇರಿದರು.

ಈ ಕುರಿತು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಇಂದು ಹೊಸ ಪ್ರಯಾಣ ಪ್ರಾರಂಭವಾಗಲಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಬೇಕು. ಇಂದಿನಿಂದ ಇದು ಇನ್‌ಸ್ಟಾಗ್ರಾಮ್‌ನಲ್ಲಿ ನನ್ನ ರಾಜಕೀಯ ಪ್ರೊಫೈಲ್ ಆಗಿರುತ್ತದೆ” ಎಂದು ಲಿಂಕ್ ಒಂದನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಪುಟದ ಅವರ ಬಯೋದಲ್ಲಿ ‘ರಾಜಕಾರಣಿ, ಎಐಟಿಎಂಸಿ’ ಎಂದು ಬರೆಯಲಾಗಿದೆ.

ಮನೋಜ್ ತಿವಾರಿ ಅಂತಾರಾಷ್ಟ್ರೀಯ ಏಕದಿನ ಮತ್ತು ಟಿ 20 ವಿಭಾಗದಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಅವರು ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್‌) ಕೋಲ್ಕತಾ ನೈಟ್ ರೈಡರ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರೈಸಿಂಗ್ ಪುಣೆ ಸೂಪರ್‌ಜಾಯಂಟ್ಸ್ ಪರ ಆಡಿದ್ದಾರೆ.

ಇತ್ತೀಚೆಗೆ ಮನೋಜ್ ತಿವಾರಿ ಕೇಂದ್ರ ಸರ್ಕಾರದ ವಿರುದ್ಧ ತೀಕ್ಷ್ಣ ಟೀಕೆಗಳ ಮೂಲಕ ಗಮನ ಸೆಳೆದಿದ್ದರು. ರೈತ ಹೋರಾಟದ ವಿರುದ್ಧ ಭಾರತದ ಸೆಲೆಬ್ರಿಟಿಗಳು ಮತ್ತು ಕ್ರಿಕೆಟಿಗರು ಒಂದೇ ಥರನೇ ಟ್ವೀಟ್ ಮಾಡುತ್ತಿದ್ದ ಸಮಯದಲ್ಲಿ ಅದನ್ನು ಕೈಗೊಂಬೆ ಆಟವೆಂದು ಕರೆದು ವ್ಯಂಗ್ಯವಾಡಿದ್ದರು. “ನಾನು ಚಿಕ್ಕವನಿದ್ದಾಗ ಯಾವತ್ತೂ ಈ ಕೈಗೊಂಬೆ ಆಟ ನೋಡಲು ಆಗಿರಲಿಲ್ಲ.. ಅದನ್ನು ನೋಡಲು 35 ವರ್ಷ ಬೇಕಾಯಿತು” ಎಂದು ಕೈಗೊಂಬೆ ಆಟದ ಫೋಟೊವೊಂದನ್ನು ಟ್ವೀಟ್ ಮಾಡಿದ್ದರು.

ಅಲ್ಲದೆ ಏರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ವಿರುದ್ಧ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ “ಪೆಟ್ರೋಳ್ ಅತ್ಯುತ್ತಮ ಇನ್ನಿಂಗ್ಸ್ ಪ್ರದರ್ಶಿಸಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಪೆಟ್ರೋಲ್ ಶತಕ ಬಾರಿಸಿದೆ. ಡೀಸೆಲ್ ನ ಬೆಂಬಲದೊಂದಿಗೆ ಉತ್ತಮ ಇನ್ನಿಂಗ್ಸ್ ಕಟಿದ್ದು, ನಿಮ್ಮಿಬ್ಬರದು ಉತ್ತಮ ಜೊತೆಯಾಟವಾಗಿದೆ. ಸಾಮಾನ್ಯ ಜನರ ವಿರುದ್ಧ ಆಡುವುದು ತುಂಬಾ ಕಷ್ಟಕರ ಕೆಲಸ. ಆದರೆ ನೀವದನ್ನು ಮಾಡಿ ತೋರಿಸಿದ್ದೀರಿ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...