Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...