Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...