Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...