Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...