Homeಮುಖಪುಟ'ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ' | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

‘ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ’ | ಪ್ರತಿಭಟನಾ ನಿರತ ಮಹಿಳೆಗೆ ಬಿಜೆಪಿಯ ಹಿರಿಯ ನಾಯಕ ಬೆದರಿಕೆ

- Advertisement -
- Advertisement -

ಶುಕ್ರವಾರ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಹಿಳಾ ಪ್ರತಿಭಟನಾಕಾರರೊಬ್ಬರಿಗೆ ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬೆದರಿಕೆ ಹಾಕುತ್ತಿರುವ ವಿಡಿಯೊ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಾಜಿ ಸಂಸದರಾಗಿರುವ ದಿಲೀಪ್ ಅವರು ರಾಜ್ಯದ ಖರಗ್‌ಪುರದ ವಾರ್ಡ್ 6 ರಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಲು ಹೋದಾಗ ಈ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ

ಸಂಸತ್ ಸದಸ್ಯರಾಗಿದ್ದಾಗ ಅವರ ಅನುಪಸ್ಥಿತಿಯನ್ನು ಪ್ರಶ್ನಿಸಿ ಸ್ಥಳೀಯ ಮಹಿಳೆಯರು ಘೋಷ್ ಅವರನ್ನು ಘೆರಾವ್ ಹಾಕಿದಾಗ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿತು. ಪ್ರಸ್ತುತ ರಸ್ತೆಯನ್ನು ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಪ್ರದೀಪ್ ಸರ್ಕಾರ್ ನಿರ್ಮಿಸಿದ್ದಾರೆ ಎಂದು ಮಹಿಳೆ ಹೇಳಿದ್ದರು. ಪಶ್ಚಿಮ ಬಂಗಾಳ

“ನೀವು ಇಷ್ಟು ದಿನ ಎಲ್ಲಿದ್ದೀರಿ? ನೀವು ಸಂಸದರಾಗಿದ್ದಾಗ ನಾವು ನಿಮ್ಮನ್ನು ಒಂದು ದಿನವೂ ನೋಡಿರಲಿಲ್ಲ. ಈಗ, ನಮ್ಮ ಕೌನ್ಸಿಲರ್ ರಸ್ತೆ ನಿರ್ಮಿಸಿದ ನಂತರ, ನೀವು ಇಲ್ಲಿಗೆ ಬಂದಿದ್ದೀರಾ?” ಎಂದು ಮಹಿಳೆಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಈ ವೇಳೆ ದಿಲೀಪ್ ಘೋಷ್ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿ ಪ್ರತಿಭಟನಾಕಾರರನ್ನು ತೃಣಮೂಲ ಬೆಂಬಲಿಗರು ಎಂದು ಕರೆದಿದ್ದಾರೆ. “ನಾನು ಅದನ್ನು ನಿಮ್ಮ ತಂದೆಯ ಹಣದಿಂದ ನಿರ್ಮಿಸಿಲ್ಲ, ನನ್ನ ಹಣದಿಂದ ನಿರ್ಮಿಸಿದ್ದೇನೆ. ಹೋಗಿ ಪ್ರದೀಪ್ ಸರ್ಕಾರ್ ಅವರನ್ನು ಅದರ ಬಗ್ಗೆ ಕೇಳಿ” ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ಮಹಿಳೆ ಆಕ್ರೋಶಗೊಂಡು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. “ನನ್ನ ತಂದೆಯನ್ನು ಏಕೆ ಎಳೆದುತರುತ್ತೀರಿ? ಸಂಸದರಾಗಿದ್ದ ನೀವು ಹೀಗೆ ಮಾತನಾಡಬಹುದೇ?” ಎಂದು ಕೇಳಿದ್ದಾರೆ. ಈ ವೇಳೆ ದಿಲೀಪ್ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಕೂಡಾ ಎಳೆದುತರುತ್ತೇನೆ” ಎಂದು ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ.

“ಕಿರುಚಬೇಡಿ. ನಾನು ನಿಮ್ಮ ಕತ್ತು ಹಿಸುಕುತ್ತೇನೆ. ನಾನು ಸಂಸದನಾಗಿದ್ದಾಗ ನನ್ನ MPLAD ನಿಧಿಯಿಂದ ಇದಕ್ಕಾಗಿ ಹಣವನ್ನು ನೀಡಿದ್ದೆ,” ಎಂದು ಪ್ರತಿಭಟನಾಕಾರರನ್ನು ಬೆದರಿಸಿ ಅವರನ್ನು “ತೃಣಮೂಲದ ನಾಯಿಗಳು” ಎಂದು ದಲೀಪ್‌ ಕರೆದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಹಿಳೆಯ ನಡುವಿನ ವಾಗ್ವಾದವು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿತು. ಹತ್ತಿರದ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದು, ಆ ಹೊತ್ತಿಗೆ ಮಹಿಳೆಯರು ಅವರ ವಾಹನವನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ದಿಲೀಪ್‌ ಘೋಷ್ ಪೊಲೀಸ್ ರಕ್ಷಣೆಯಲ್ಲಿ ಪ್ರದೇಶವನ್ನು ಬಿಡಬೇಕಾಯಿತು.

ಈ ಬಗ್ಗೆ ಆನ್‌ಲೈನ್ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ದಿಲೀಪ್ ಘೋಷ್, ರಸ್ತೆಯನ್ನು 2.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ತಗ್ಗು ಪ್ರದೇಶಗಳಲ್ಲಿನ ನಿವಾಸಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದ್ದು, ಈ ಘಟನೆಯು ಬಿಜೆಪಿಯ ನಡವಳಿಕೆಯನ್ನು ಟೀಕಿಸಲು ತೃಣಮೂಲ ಕಾಂಗ್ರೆಸ್‌ ಬಳಸಿಕೊಂಡಿದೆ. ಹಿರಿಯ ಬಿಜೆಪಿ ನಾಯಕನ ವರ್ತನೆಯನ್ನು ಖಂಡಿಸಿರುವ ತೃಣಮೂಲ ಕೌನ್ಸಿಲರ್ ಮತ್ತು ಖರಗ್‌ಪುರದ ಮಾಜಿ ಶಾಸಕ ಸರ್ಕಾರ್ ಅವರು, “ಅವರು ಅಲ್ಲಿಗೆ ಹೋಗಿ ಗಲಾಟೆ ಮಾಡಿಕೊಂಡರು. ಅವರ ತಂದೆಯನ್ನು ಎಳೆದುತರುವ ಮೂಲಕ ಮಹಿಳೆಯನ್ನು ಅವಮಾನ ಮಾಡಿದರು. ನಾನು ಅಲ್ಲಿ ಇರಲಿಲ್ಲ, ಆದರೆ ಅವರು ನನ್ನ ತಂದೆಯನ್ನು ಸಹ ಅವಮಾನಿಸಿದ್ದಾರೆ. ಅವರು ಮಹಿಳೆಯರನ್ನು 500 ರೂಪಾಯಿ ಕೆಲಸಗಾರರು ಎಂದು ಕರೆದರು.” ಎಂದು ಹೇಳಿದ್ದಾರೆ.

“ಈ ಘಟನೆಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರು ಖರಗ್‌ಪುರದಲ್ಲಿ ಎಲ್ಲಿಗೆ ಹೋದರೂ ಪ್ರತಿಭಟನೆಗಳು ನಡೆಯುತ್ತವೆ. ಇಂತಹ ಭಾಷೆ ಮಾಜಿ ಸಂಸದರಿಗೆ ತಕ್ಕದ್ದಲ್ಲ” ಎಂದು ಸರ್ಕಾರ್ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...