Homeಮುಖಪುಟಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂಬ ಸಮನ್ಸ್‌ಗೆ ಪಶ್ಚಿಮ ಬಂಗಾಳ ಸರ್ಕಾರವು ಪ್ರತಿ‌ಕ್ರಿಯಿಸಿದ್ದು, ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿತ್ತು. ಭದ್ರತಾ ವೈಫಲ್ಯದ ಕುರಿತು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿ, ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಹಾಗೂ ಹಿರಿಯ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯದ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಕೇಂದ್ರ ನೋಟಿಸು ಜಾರಿ ಮಾಡಿತ್ತು.

ಇದನ್ನೂ ಓದಿ: ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಗೃಹ ಸಚಿವಾಲಯದ ಮುಂದೆ ಹಾಜರಾಗಲು ಡಿಜಿಪಿಗೆ ನೋಟಿಸ್!

ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಬಂಗಾಳ ಸರ್ಕಾರದ ಉನ್ನತ ಅಧಿಕಾರಿ ಅಲಪನ್ ಬಂಡ್ಯೋಪಾಧ್ಯಾಯ, “ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಈಗಾಗಲೇ ಈ ಸಮಸ್ಯೆಯನ್ನು ಅತ್ಯಂತ ಗಂಭೀರತೆಯಿಂದ ಪರಿಹರಿಸುತ್ತಿದೆ. ದಾಳಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಏಳು ಜನರನ್ನು ಬಂಧಿಸಲಾಗಿದೆ. ಗೃಹ ಸಚಿವಾಲಯ ಡಿಸೆಂಬರ್ 14 ರಂದು ಕರೆದಿರುವ ಸಭೆಯಲ್ಲಿ ರಾಜ್ಯದ ಅಧಿಕಾರಿಗಳ ಉಪಸ್ಥಿತಿ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಬಂಗಾಳಕ್ಕೆ ಆಗಮಿಸಿದ್ದ ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ ನೀಡಲಾಗಿದೆ. ಅವರಿಗೆ ಬುಲೆಟ್‌ಫ್ರೂಫ್ ಕಾರ್ ನೀಡಲಾಗಿತ್ತು. ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ ನಾಲ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು ಎಂದು ಬಂಗಾಳ ಸರ್ಕಾರ ಈಗಾಗಲೇ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಘಟನೆಯ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಇದನ್ನು ‘ಯೋಜಿತ ಪಿತೂರಿ’ ಎಂದು ಕರೆದು, ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸಿ ಎಂದು ಪಶ್ಷಿಮ ಬಂಗಾಳ ರಾಜ್ಯಪಾಲರಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ:  2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...