Homeಮುಖಪುಟಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಜೆ.ಪಿ ನಡ್ಡಾ ಕಾರಿನ ಮೇಲೆ ದಾಳಿ: ವಿಚಾರಣೆಗೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದ ಪಶ್ಚಿಮ ಬಂಗಾಳ

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಬಿಜೆಪಿ ಆರೋಪಿಸಿತ್ತು

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ಹಿನ್ನಲೆಯಲ್ಲಿ, ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ವಿಚಾರಣೆಗೆ ಹಾಜರಾಗಬೇಕು ಎಂಬ ಸಮನ್ಸ್‌ಗೆ ಪಶ್ಚಿಮ ಬಂಗಾಳ ಸರ್ಕಾರವು ಪ್ರತಿ‌ಕ್ರಿಯಿಸಿದ್ದು, ಯಾವುದೇ ಅಧಿಕಾರಿ ದೆಹಲಿಗೆ ತೆರಳಿ ಗೃಹ ಸಚಿವಾಲಯದ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿತ್ತು. ಭದ್ರತಾ ವೈಫಲ್ಯದ ಕುರಿತು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿ, ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಹಾಗೂ ಹಿರಿಯ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯದ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಕೇಂದ್ರ ನೋಟಿಸು ಜಾರಿ ಮಾಡಿತ್ತು.

ಇದನ್ನೂ ಓದಿ: ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಗೃಹ ಸಚಿವಾಲಯದ ಮುಂದೆ ಹಾಜರಾಗಲು ಡಿಜಿಪಿಗೆ ನೋಟಿಸ್!

ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಬಂಗಾಳ ಸರ್ಕಾರದ ಉನ್ನತ ಅಧಿಕಾರಿ ಅಲಪನ್ ಬಂಡ್ಯೋಪಾಧ್ಯಾಯ, “ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಈಗಾಗಲೇ ಈ ಸಮಸ್ಯೆಯನ್ನು ಅತ್ಯಂತ ಗಂಭೀರತೆಯಿಂದ ಪರಿಹರಿಸುತ್ತಿದೆ. ದಾಳಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಏಳು ಜನರನ್ನು ಬಂಧಿಸಲಾಗಿದೆ. ಗೃಹ ಸಚಿವಾಲಯ ಡಿಸೆಂಬರ್ 14 ರಂದು ಕರೆದಿರುವ ಸಭೆಯಲ್ಲಿ ರಾಜ್ಯದ ಅಧಿಕಾರಿಗಳ ಉಪಸ್ಥಿತಿ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಬಂಗಾಳಕ್ಕೆ ಆಗಮಿಸಿದ್ದ ಜೆ.ಪಿ ನಡ್ಡಾ ಅವರಿಗೆ ಝಡ್‌ ಕ್ಯಾಟಗರಿ ಭದ್ರತೆ ನೀಡಲಾಗಿದೆ. ಅವರಿಗೆ ಬುಲೆಟ್‌ಫ್ರೂಫ್ ಕಾರ್ ನೀಡಲಾಗಿತ್ತು. ಬೆಂಗಾವಲು ಮತ್ತು ಭದ್ರತಾ ಅಧಿಕಾರಿಗಳನ್ನೂ ನೇಮಕ ಮಾಡಲಾಗಿತ್ತು. ಅವರು ಚಲಿಸುವ ಮಾರ್ಗದಲ್ಲಿ ನಾಲ 4 ಎಸ್ಪಿಗಳು, 8 ಡೆಪ್ಯೂಟಿ ಎಸ್ಪಿಗಳು, 14 ಇನ್ಸ್ಪೆಕ್ಟರ್‌ಗಳು, 70 ಸಬ್ಇನ್ಸ್ಪೆಕ್ಟರ್‌‌ಗಳು, 40 ಆರ್‌‌ಎಎಫ್ ಸಿಬ್ಬಂದಿ, 259 ಕಾನ್ಸ್ಟೆಬಲ್‌‌ಗಳು ಮತ್ತು 350 ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿತ್ತು. ಭದ್ರತೆಯ ಮೇಲ್ವಿಚಾರಣೆಗೆ ಡಿಐಜಿಯನ್ನು ನಿಯೋಜಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಜೆ.ಪಿ ನಡ್ಡಾ ವಾಹನಗಳ ಜೊತೆಗೆ ಇತರೆ ವಾಹನಗಳನ್ನೂ ನಿಯೋಜಿಸಿದ ಕಾರಣ ಪರಿಸ್ಥಿತಿ ಬಿಗಡಾಯಿಸಿತು ಎಂದು ಬಂಗಾಳ ಸರ್ಕಾರ ಈಗಾಗಲೇ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಘಟನೆಯ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಇದನ್ನು ‘ಯೋಜಿತ ಪಿತೂರಿ’ ಎಂದು ಕರೆದು, ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸಿ ಎಂದು ಪಶ್ಷಿಮ ಬಂಗಾಳ ರಾಜ್ಯಪಾಲರಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ:  2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....