Homeಚಳವಳಿಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

- Advertisement -
- Advertisement -

ಶಿಕ್ಷಣ ಸಚಿವ ಬ್ರತ್ಯ ಬಸು ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಕರೆ ನೀಡಿದ್ದ ಮುಷ್ಕರದ ಸಂದರ್ಭದಲ್ಲಿ ವಿವಿಧ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ತೃಣಮೂಲ ಕಾಂಗ್ರೆಸ್ ಛಾತ್ರ ಪರಿಷತ್ (ಟಿಎಂಸಿಪಿ) ಕಾರ್ಯಕರ್ತರ ನಡುವೆ ಘರ್ಷಣೆಗಳು ಭುಗಿಲೆದ್ದವು. ಪಶ್ಚಿಮ ಬಂಗಾಳ

ಪಶ್ಚಿಮ ಮೇದಿನಿಪುರ ಜಿಲ್ಲೆಯ ಮೇದಿನಿಪುರ ಪಟ್ಟಣ, ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ, ಕೂಚ್ ಬೆಹಾರ್ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ಟಿಎಂಸಿಯ ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಎಐಡಿಎಸ್‌ಒ ಮತ್ತು ಎಸ್‌ಎಫ್‌ಐನ ಎಡಪಂಥೀಯ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿವೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನ ಸದಸ್ಯರು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒಂದು ದಿನದ ಮುಷ್ಕರವನ್ನು ಕೋಲ್ಕತ್ತಾದ ಜಾದವ್‌ಪುರ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ನಡೆಸಿದ್ದಾರೆ.

ಕಲ್ಕತ್ತಾ ವಿಶ್ವವಿದ್ಯಾಲಯ, ರವೀಂದ್ರ ಭಾರತಿ ವಿಶ್ವವಿದ್ಯಾಲಯ, ಉತ್ತರ ಬಂಗಾಳ ವಿಶ್ವವಿದ್ಯಾಲಯ ಮತ್ತು ಬರ್ದ್ವಾನ್ ವಿಶ್ವವಿದ್ಯಾಲಯದಂತಹ ಇತರ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆದರೂ ಕೆಲವು ತರಗತಿಗಳು ನಡೆಯದ ಕಾರಣ ಮುಷ್ಕರವು ಭಾಗಶಃ ಪರಿಣಾಮ ಬೀರಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಜಾದವ್‌ಪುರ ವಿಶ್ವವಿದ್ಯಾಲಯ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಂತಲ್ಲದೆ ಈ ಕ್ಯಾಂಪಸ್‌ಗಳಲ್ಲಿ ಮುಷ್ಕರದಲ್ಲಿ ಕಡಿಮೆ ಎಸ್‌ಎಫ್‌ಐ ಕಾರ್ಯಕರ್ತರು ಕಾಣಿಸಿಕೊಂಡರು ಎಂದು ವರದಿಯಾಗಿದೆ. ಆಡಳಿತಾರೂಢ ಟಿಎಂಸಿಯ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್‌ನ ಕಾರ್ಯಕರ್ತರು ಸಹ ಕ್ಯಾಂಪಸ್‌ಗಳಲ್ಲಿ ಕಾಣಿಸಿಕೊಂಡರು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ

ಎಸ್‌ಎಫ್‌ಐ ಕಾರ್ಯಕರ್ತರು ರಸ್ತೆ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟುಮಾಡದ ಕಾರಣ ಮುಷ್ಕರವು ಇಲ್ಲಿಯವರೆಗೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರಲಿಲ್ಲ. ಪಶ್ಚಿಮ ಬಂಗಾಳ ಮಂಡಳಿಯ 12 ನೇ ತರಗತಿ ಪರೀಕ್ಷೆಗಳು ಸಹ ಸೋಮವಾರ ಪ್ರಾರಂಭವಾಗಿವೆ. ವಿಧ್ಯಾರ್ಥಿಗಳು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸರಾಗವಾಗಿ ತೆರಳಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಸಚಿವ ಬಸು ಅವರ ಬೆಂಗಾವಲು ಪಡೆಯಲ್ಲಿದ್ದ ಕಾರಿಗೆ ಸಿಲುಸಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ವಿದ್ಯಾರ್ಥಿ ಸಂಘ ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಎಡಪಂಥೀಯ ವಿದ್ಯಾರ್ಥಿಗಳು ಸಚಿವರನ್ನು ಕ್ಯಾಂಪಸ್‌ನಿಂದ ಹೊರಹೋಗದಂತೆ ತಡೆಯಲು ಪ್ರಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಬಸು ಅವರ ಕಾರಿನ ವಿಂಡ್‌ಶೀಲ್ಡ್‌ಗೆ ಹಾನಿ ಮಾಡಿದ್ದರಿಂದ ಬಸು ಅವರಿಗೆ ಗಾಯಗಳಾಗಿವೆ.

ಟಿಎಂಸಿ ಬೆಂಬಲಿತ ಶಿಕ್ಷಕರ ಸಂಘವಾದ ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘದ (WBCUPA) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ನಂತರ ಬಸು ಆವರಣದಿಂದ ಹೊರಡುವಾಗ ಈ ಘಟನೆ ಸಂಭವಿಸಿತ್ತು.

“ಶನಿವಾರ ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಡಬ್ಲ್ಯುಬಿಸಿಯುಪಿಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಟಿಎಂಸಿ ಬೆಂಬಲಿಗರು ಬಸು ಅವರ ಸಮ್ಮುಖದಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯವನ್ನು ಪ್ರಚೋದಿಸಿದ್ದರು” ಎಂದು ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಶುವಜಿತ್ ಸರ್ಕಾರ್ ಆರೋಪಿಸಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಮಾತನಾಡಿದ ಸರ್ಕಾರ್, “ವಿದ್ಯಾರ್ಥಿಗಳು ಉಪಕುಲಪತಿಗಳ ಸಮ್ಮುಖದಲ್ಲಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲು ಮಾತ್ರ ಬಯಸಿದ್ದರು. ಆದರೆ ಅವರು ಅವರೊಂದಿಗೆ ಸರಿಯಾಗಿ ವರ್ತಿಸದೆ, ಕ್ಯಾಂಪಸ್‌ನಿಂದ ಹೊರಹೋಗಲು ಪ್ರಯತ್ನಿಸಿದರು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಚಿವರೊಂದಿಗೆ ಸಭೆ ನಡೆಸುವಂತೆ ಒತ್ತಾಯಿಸಿದರೂ, ಅವರು ಬಲಪಂಥೀಯ ಟಿಎಂಸಿ ಮತ್ತು ಹೊರಗಿನವರೊಂದಿಗೆ ತಮ್ಮ ಕಾರನ್ನು ಹತ್ತಿದರು. ಈ ವೇಳೆ ಅವರ ಚಾಲಕ ವಾಹನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ವಾಹನವನ್ನು ವೇಗಗೊಳಿಸಿದರು. ಹಾಗಾಗಿ ಅವರ ಕಾರು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗೊಳಿಸಿತು, ಅವರಲ್ಲಿ ಒಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಅವರು ಹಿಂತಿರುಗಿ ನೋಡದೆ ವೇಗವಾಗಿ ಓಡಿಹೋದರು ಎಂದು ಸರ್ಕಾರ್ ಆರೋಪಿಸಿದ್ದಾರೆ.

“ಇಬ್ಬರು ವಿದ್ಯಾರ್ಥಿಗಳ ಗಾಯಗಳಿಗೆ ಬಸು ಕಾರಣ. ಹಾಗಾಗಿ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಂಕಿ ಹಚ್ಚಿದ್ದಕ್ಕಾಗಿ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಸೋಮವಾರದಿಂದ ಪ್ರಾರಂಭವಾದ ಹೈಯರ್ ಸೆಕೆಂಡರಿ ಪರೀಕ್ಷೆಗಳ ಸುಗಮ ನಿರ್ವಹಣೆಗೆ ಎಸ್‌ಎಫ್‌ಐ ತನ್ನ ಸಹಾಯವನ್ನು ನೀಡಲಿದೆ. ಅಭ್ಯರ್ಥಿಗಳಿಗೆ ಸಹಾಯ ಮಾಡಲು ಪರೀಕ್ಷಾ ಕೇಂದ್ರಗಳ ಬಳಿ ಶಿಬಿರಗಳನ್ನು ಆಯೋಜಿಸಲಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...