Homeಚಳವಳಿಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

- Advertisement -
- Advertisement -

ಶಿಕ್ಷಣ ಸಚಿವ ಬ್ರತ್ಯ ಬಸು ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಕರೆ ನೀಡಿದ್ದ ಮುಷ್ಕರದ ಸಂದರ್ಭದಲ್ಲಿ ವಿವಿಧ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ತೃಣಮೂಲ ಕಾಂಗ್ರೆಸ್ ಛಾತ್ರ ಪರಿಷತ್ (ಟಿಎಂಸಿಪಿ) ಕಾರ್ಯಕರ್ತರ ನಡುವೆ ಘರ್ಷಣೆಗಳು ಭುಗಿಲೆದ್ದವು. ಪಶ್ಚಿಮ ಬಂಗಾಳ

ಪಶ್ಚಿಮ ಮೇದಿನಿಪುರ ಜಿಲ್ಲೆಯ ಮೇದಿನಿಪುರ ಪಟ್ಟಣ, ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ, ಕೂಚ್ ಬೆಹಾರ್ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ಟಿಎಂಸಿಯ ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಎಐಡಿಎಸ್‌ಒ ಮತ್ತು ಎಸ್‌ಎಫ್‌ಐನ ಎಡಪಂಥೀಯ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿವೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನ ಸದಸ್ಯರು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒಂದು ದಿನದ ಮುಷ್ಕರವನ್ನು ಕೋಲ್ಕತ್ತಾದ ಜಾದವ್‌ಪುರ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ನಡೆಸಿದ್ದಾರೆ.

ಕಲ್ಕತ್ತಾ ವಿಶ್ವವಿದ್ಯಾಲಯ, ರವೀಂದ್ರ ಭಾರತಿ ವಿಶ್ವವಿದ್ಯಾಲಯ, ಉತ್ತರ ಬಂಗಾಳ ವಿಶ್ವವಿದ್ಯಾಲಯ ಮತ್ತು ಬರ್ದ್ವಾನ್ ವಿಶ್ವವಿದ್ಯಾಲಯದಂತಹ ಇತರ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆದರೂ ಕೆಲವು ತರಗತಿಗಳು ನಡೆಯದ ಕಾರಣ ಮುಷ್ಕರವು ಭಾಗಶಃ ಪರಿಣಾಮ ಬೀರಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಜಾದವ್‌ಪುರ ವಿಶ್ವವಿದ್ಯಾಲಯ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಂತಲ್ಲದೆ ಈ ಕ್ಯಾಂಪಸ್‌ಗಳಲ್ಲಿ ಮುಷ್ಕರದಲ್ಲಿ ಕಡಿಮೆ ಎಸ್‌ಎಫ್‌ಐ ಕಾರ್ಯಕರ್ತರು ಕಾಣಿಸಿಕೊಂಡರು ಎಂದು ವರದಿಯಾಗಿದೆ. ಆಡಳಿತಾರೂಢ ಟಿಎಂಸಿಯ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್‌ನ ಕಾರ್ಯಕರ್ತರು ಸಹ ಕ್ಯಾಂಪಸ್‌ಗಳಲ್ಲಿ ಕಾಣಿಸಿಕೊಂಡರು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ

ಎಸ್‌ಎಫ್‌ಐ ಕಾರ್ಯಕರ್ತರು ರಸ್ತೆ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟುಮಾಡದ ಕಾರಣ ಮುಷ್ಕರವು ಇಲ್ಲಿಯವರೆಗೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರಲಿಲ್ಲ. ಪಶ್ಚಿಮ ಬಂಗಾಳ ಮಂಡಳಿಯ 12 ನೇ ತರಗತಿ ಪರೀಕ್ಷೆಗಳು ಸಹ ಸೋಮವಾರ ಪ್ರಾರಂಭವಾಗಿವೆ. ವಿಧ್ಯಾರ್ಥಿಗಳು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸರಾಗವಾಗಿ ತೆರಳಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಸಚಿವ ಬಸು ಅವರ ಬೆಂಗಾವಲು ಪಡೆಯಲ್ಲಿದ್ದ ಕಾರಿಗೆ ಸಿಲುಸಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ವಿದ್ಯಾರ್ಥಿ ಸಂಘ ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಎಡಪಂಥೀಯ ವಿದ್ಯಾರ್ಥಿಗಳು ಸಚಿವರನ್ನು ಕ್ಯಾಂಪಸ್‌ನಿಂದ ಹೊರಹೋಗದಂತೆ ತಡೆಯಲು ಪ್ರಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಬಸು ಅವರ ಕಾರಿನ ವಿಂಡ್‌ಶೀಲ್ಡ್‌ಗೆ ಹಾನಿ ಮಾಡಿದ್ದರಿಂದ ಬಸು ಅವರಿಗೆ ಗಾಯಗಳಾಗಿವೆ.

ಟಿಎಂಸಿ ಬೆಂಬಲಿತ ಶಿಕ್ಷಕರ ಸಂಘವಾದ ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘದ (WBCUPA) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ನಂತರ ಬಸು ಆವರಣದಿಂದ ಹೊರಡುವಾಗ ಈ ಘಟನೆ ಸಂಭವಿಸಿತ್ತು.

“ಶನಿವಾರ ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಡಬ್ಲ್ಯುಬಿಸಿಯುಪಿಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಟಿಎಂಸಿ ಬೆಂಬಲಿಗರು ಬಸು ಅವರ ಸಮ್ಮುಖದಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯವನ್ನು ಪ್ರಚೋದಿಸಿದ್ದರು” ಎಂದು ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಶುವಜಿತ್ ಸರ್ಕಾರ್ ಆರೋಪಿಸಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಮಾತನಾಡಿದ ಸರ್ಕಾರ್, “ವಿದ್ಯಾರ್ಥಿಗಳು ಉಪಕುಲಪತಿಗಳ ಸಮ್ಮುಖದಲ್ಲಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲು ಮಾತ್ರ ಬಯಸಿದ್ದರು. ಆದರೆ ಅವರು ಅವರೊಂದಿಗೆ ಸರಿಯಾಗಿ ವರ್ತಿಸದೆ, ಕ್ಯಾಂಪಸ್‌ನಿಂದ ಹೊರಹೋಗಲು ಪ್ರಯತ್ನಿಸಿದರು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಚಿವರೊಂದಿಗೆ ಸಭೆ ನಡೆಸುವಂತೆ ಒತ್ತಾಯಿಸಿದರೂ, ಅವರು ಬಲಪಂಥೀಯ ಟಿಎಂಸಿ ಮತ್ತು ಹೊರಗಿನವರೊಂದಿಗೆ ತಮ್ಮ ಕಾರನ್ನು ಹತ್ತಿದರು. ಈ ವೇಳೆ ಅವರ ಚಾಲಕ ವಾಹನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ವಾಹನವನ್ನು ವೇಗಗೊಳಿಸಿದರು. ಹಾಗಾಗಿ ಅವರ ಕಾರು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗೊಳಿಸಿತು, ಅವರಲ್ಲಿ ಒಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಅವರು ಹಿಂತಿರುಗಿ ನೋಡದೆ ವೇಗವಾಗಿ ಓಡಿಹೋದರು ಎಂದು ಸರ್ಕಾರ್ ಆರೋಪಿಸಿದ್ದಾರೆ.

“ಇಬ್ಬರು ವಿದ್ಯಾರ್ಥಿಗಳ ಗಾಯಗಳಿಗೆ ಬಸು ಕಾರಣ. ಹಾಗಾಗಿ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಂಕಿ ಹಚ್ಚಿದ್ದಕ್ಕಾಗಿ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಸೋಮವಾರದಿಂದ ಪ್ರಾರಂಭವಾದ ಹೈಯರ್ ಸೆಕೆಂಡರಿ ಪರೀಕ್ಷೆಗಳ ಸುಗಮ ನಿರ್ವಹಣೆಗೆ ಎಸ್‌ಎಫ್‌ಐ ತನ್ನ ಸಹಾಯವನ್ನು ನೀಡಲಿದೆ. ಅಭ್ಯರ್ಥಿಗಳಿಗೆ ಸಹಾಯ ಮಾಡಲು ಪರೀಕ್ಷಾ ಕೇಂದ್ರಗಳ ಬಳಿ ಶಿಬಿರಗಳನ್ನು ಆಯೋಜಿಸಲಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...