Homeಚಳವಳಿಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳ | SFI ಮುಷ್ಕರದ ವೇಳೆ ಎಡಪಂಥೀಯ ಮತ್ತು TMCP ಕಾರ್ಯಕರ್ತರ ನಡುವೆ ಘರ್ಷಣೆ

- Advertisement -
- Advertisement -

ಶಿಕ್ಷಣ ಸಚಿವ ಬ್ರತ್ಯ ಬಸು ಅವರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಕರೆ ನೀಡಿದ್ದ ಮುಷ್ಕರದ ಸಂದರ್ಭದಲ್ಲಿ ವಿವಿಧ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ತೃಣಮೂಲ ಕಾಂಗ್ರೆಸ್ ಛಾತ್ರ ಪರಿಷತ್ (ಟಿಎಂಸಿಪಿ) ಕಾರ್ಯಕರ್ತರ ನಡುವೆ ಘರ್ಷಣೆಗಳು ಭುಗಿಲೆದ್ದವು. ಪಶ್ಚಿಮ ಬಂಗಾಳ

ಪಶ್ಚಿಮ ಮೇದಿನಿಪುರ ಜಿಲ್ಲೆಯ ಮೇದಿನಿಪುರ ಪಟ್ಟಣ, ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿ, ಕೂಚ್ ಬೆಹಾರ್ ಜಿಲ್ಲೆ ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ಟಿಎಂಸಿಯ ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಎಐಡಿಎಸ್‌ಒ ಮತ್ತು ಎಸ್‌ಎಫ್‌ಐನ ಎಡಪಂಥೀಯ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿವೆ.

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನ ಸದಸ್ಯರು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಒಂದು ದಿನದ ಮುಷ್ಕರವನ್ನು ಕೋಲ್ಕತ್ತಾದ ಜಾದವ್‌ಪುರ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ನಡೆಸಿದ್ದಾರೆ.

ಕಲ್ಕತ್ತಾ ವಿಶ್ವವಿದ್ಯಾಲಯ, ರವೀಂದ್ರ ಭಾರತಿ ವಿಶ್ವವಿದ್ಯಾಲಯ, ಉತ್ತರ ಬಂಗಾಳ ವಿಶ್ವವಿದ್ಯಾಲಯ ಮತ್ತು ಬರ್ದ್ವಾನ್ ವಿಶ್ವವಿದ್ಯಾಲಯದಂತಹ ಇತರ ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ನಡೆದರೂ ಕೆಲವು ತರಗತಿಗಳು ನಡೆಯದ ಕಾರಣ ಮುಷ್ಕರವು ಭಾಗಶಃ ಪರಿಣಾಮ ಬೀರಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಜಾದವ್‌ಪುರ ವಿಶ್ವವಿದ್ಯಾಲಯ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಂತಲ್ಲದೆ ಈ ಕ್ಯಾಂಪಸ್‌ಗಳಲ್ಲಿ ಮುಷ್ಕರದಲ್ಲಿ ಕಡಿಮೆ ಎಸ್‌ಎಫ್‌ಐ ಕಾರ್ಯಕರ್ತರು ಕಾಣಿಸಿಕೊಂಡರು ಎಂದು ವರದಿಯಾಗಿದೆ. ಆಡಳಿತಾರೂಢ ಟಿಎಂಸಿಯ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್‌ನ ಕಾರ್ಯಕರ್ತರು ಸಹ ಕ್ಯಾಂಪಸ್‌ಗಳಲ್ಲಿ ಕಾಣಿಸಿಕೊಂಡರು ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳ

ಎಸ್‌ಎಫ್‌ಐ ಕಾರ್ಯಕರ್ತರು ರಸ್ತೆ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟುಮಾಡದ ಕಾರಣ ಮುಷ್ಕರವು ಇಲ್ಲಿಯವರೆಗೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರಲಿಲ್ಲ. ಪಶ್ಚಿಮ ಬಂಗಾಳ ಮಂಡಳಿಯ 12 ನೇ ತರಗತಿ ಪರೀಕ್ಷೆಗಳು ಸಹ ಸೋಮವಾರ ಪ್ರಾರಂಭವಾಗಿವೆ. ವಿಧ್ಯಾರ್ಥಿಗಳು ಬೆಳಿಗ್ಗೆಯಿಂದಲೇ ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಸರಾಗವಾಗಿ ತೆರಳಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಸಚಿವ ಬಸು ಅವರ ಬೆಂಗಾವಲು ಪಡೆಯಲ್ಲಿದ್ದ ಕಾರಿಗೆ ಸಿಲುಸಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ವಿದ್ಯಾರ್ಥಿ ಸಂಘ ಚುನಾವಣೆ ನಡೆಸುವ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ಎಡಪಂಥೀಯ ವಿದ್ಯಾರ್ಥಿಗಳು ಸಚಿವರನ್ನು ಕ್ಯಾಂಪಸ್‌ನಿಂದ ಹೊರಹೋಗದಂತೆ ತಡೆಯಲು ಪ್ರಯತ್ನಿಸಿದ್ದರು. ಈ ವೇಳೆ ಪ್ರತಿಭಟನಾಕಾರರು ಬಸು ಅವರ ಕಾರಿನ ವಿಂಡ್‌ಶೀಲ್ಡ್‌ಗೆ ಹಾನಿ ಮಾಡಿದ್ದರಿಂದ ಬಸು ಅವರಿಗೆ ಗಾಯಗಳಾಗಿವೆ.

ಟಿಎಂಸಿ ಬೆಂಬಲಿತ ಶಿಕ್ಷಕರ ಸಂಘವಾದ ಪಶ್ಚಿಮ ಬಂಗಾಳ ಕಾಲೇಜು ಮತ್ತು ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘದ (WBCUPA) ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ನಂತರ ಬಸು ಆವರಣದಿಂದ ಹೊರಡುವಾಗ ಈ ಘಟನೆ ಸಂಭವಿಸಿತ್ತು.

“ಶನಿವಾರ ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಡಬ್ಲ್ಯುಬಿಸಿಯುಪಿಎ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಟಿಎಂಸಿ ಬೆಂಬಲಿಗರು ಬಸು ಅವರ ಸಮ್ಮುಖದಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯವನ್ನು ಪ್ರಚೋದಿಸಿದ್ದರು” ಎಂದು ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಶುವಜಿತ್ ಸರ್ಕಾರ್ ಆರೋಪಿಸಿದ್ದಾರೆ.

ಮಾರ್ಚ್ 1 ರಂದು ಜಾದವ್‌ಪುರ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಮಾತನಾಡಿದ ಸರ್ಕಾರ್, “ವಿದ್ಯಾರ್ಥಿಗಳು ಉಪಕುಲಪತಿಗಳ ಸಮ್ಮುಖದಲ್ಲಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲು ಮಾತ್ರ ಬಯಸಿದ್ದರು. ಆದರೆ ಅವರು ಅವರೊಂದಿಗೆ ಸರಿಯಾಗಿ ವರ್ತಿಸದೆ, ಕ್ಯಾಂಪಸ್‌ನಿಂದ ಹೊರಹೋಗಲು ಪ್ರಯತ್ನಿಸಿದರು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಸಚಿವರೊಂದಿಗೆ ಸಭೆ ನಡೆಸುವಂತೆ ಒತ್ತಾಯಿಸಿದರೂ, ಅವರು ಬಲಪಂಥೀಯ ಟಿಎಂಸಿ ಮತ್ತು ಹೊರಗಿನವರೊಂದಿಗೆ ತಮ್ಮ ಕಾರನ್ನು ಹತ್ತಿದರು. ಈ ವೇಳೆ ಅವರ ಚಾಲಕ ವಾಹನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸದೆ ವಾಹನವನ್ನು ವೇಗಗೊಳಿಸಿದರು. ಹಾಗಾಗಿ ಅವರ ಕಾರು ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗೊಳಿಸಿತು, ಅವರಲ್ಲಿ ಒಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಅವರು ಹಿಂತಿರುಗಿ ನೋಡದೆ ವೇಗವಾಗಿ ಓಡಿಹೋದರು ಎಂದು ಸರ್ಕಾರ್ ಆರೋಪಿಸಿದ್ದಾರೆ.

“ಇಬ್ಬರು ವಿದ್ಯಾರ್ಥಿಗಳ ಗಾಯಗಳಿಗೆ ಬಸು ಕಾರಣ. ಹಾಗಾಗಿ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಜಾದವ್‌ಪುರ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಂಕಿ ಹಚ್ಚಿದ್ದಕ್ಕಾಗಿ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಸೋಮವಾರದಿಂದ ಪ್ರಾರಂಭವಾದ ಹೈಯರ್ ಸೆಕೆಂಡರಿ ಪರೀಕ್ಷೆಗಳ ಸುಗಮ ನಿರ್ವಹಣೆಗೆ ಎಸ್‌ಎಫ್‌ಐ ತನ್ನ ಸಹಾಯವನ್ನು ನೀಡಲಿದೆ. ಅಭ್ಯರ್ಥಿಗಳಿಗೆ ಸಹಾಯ ಮಾಡಲು ಪರೀಕ್ಷಾ ಕೇಂದ್ರಗಳ ಬಳಿ ಶಿಬಿರಗಳನ್ನು ಆಯೋಜಿಸಲಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ಹೋಳಿ ಸಮಯದಲ್ಲಿ ಮುಸ್ಲಿಮರ ಪ್ರವೇಶ ನಿಷೇಧಕ್ಕೆ ಹಿಂದೂ ಪುರೋಹಿತರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...