Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ ನಡೆದಿದೆ.

ಮತದಾನದ ಹಕ್ಕು ಕಳೆದುಕೊಂಡ ಎಲ್ಲರೂ ಮುಸ್ಲಿಮರು. ಬಸಿರ್ಹತ್ ಉತ್ತರ ಕ್ಷೇತ್ರದ ಬೊರೊ ಗೋಬ್ರಾ ಗ್ರಾಮದ 5ನೇ ಬೂತ್‌ನ ಮತದಾರರು. ಎಸ್‌ಐಆರ್‌ ಬಳಿಕ ಪ್ರಕಟಗೊಂಡ ಮತದಾರರ ಕರಡು ಪಟ್ಟಿಯಲ್ಲಿ ಇವರೆಲ್ಲರನ್ನೂ ‘ತೀರ್ಪಿನ ಹಂತದಲ್ಲಿದ್ದಾರೆ’ ಎಂದು ಗುರುತಿಸಲಾಗಿತ್ತು. ಸೋಮವಾರ (23) ಮೊದಲ ಪೂರಕ ಪಟ್ಟಿಯಲ್ಲಿ ಇವರ ಹೆಸರು ಡಿಲೀಟ್ ಮಾಡಲಾಗಿದೆ ಎಂದು indiatoday.in ವರದಿ ಮಾಡಿದೆ.

ಬೂತ್ ಮಟ್ಟದ ಅಧಿಕಾರಿ ಮುಹಮ್ಮದ್ ಶಫಿಯುಲ್ ಅಲಂ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವುದು ಜನರ ಆಕ್ರೋಶವನ್ನು ತೀವ್ರಗೊಳಿಸಿದೆ. ಚುನಾವಣಾ ಆಯೋಗದ ಕ್ರಮದ ವಿರುದ್ದ ಅಧಿಕಾರಿಗಳ ಮನೆಗಳು ಮತ್ತು ಸ್ಥಳೀಯ ಬೀದಿಯಲ್ಲಿ ಪ್ರತಿಭಟನೆ ನಡೆಸಿರುವ ಗ್ರಾಮಸ್ಥರು, ‘ಒಂದು ಸಮುದಾಯವನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

ಮತದಾನದ ಹಕ್ಕು ಕಳೆದುಕೊಂಡವರು ಮತ್ತು ಸ್ಥಳೀಯ ಅಧಿಕಾರಿಗಳು ಚುನಾವಣಾ ಅಧಿಕಾರಿಗಳ ಪಾರದರ್ಶಕತೆಯ ಕೊರತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ.

“ಹೆಸರು ಡಿಲಿಟ್ ಆದ ಬಗ್ಗೆ ನಾನು ಬಸಿರ್ಹತ್ ಬ್ಲಾಕ್ IIರ ಬ್ಲಾಕ್ ಅಭಿವೃದ್ಧಿ ಅಧಿಕಾರಿಯಿಂದ ಪರಿಹಾರವನ್ನು ಪಡೆಯಲು ಪ್ರಯತ್ನಿಸಿದಾಗ ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಪ್ರತಿಕ್ರಿಯೆ ಬಂದಿದೆ. ಚುನಾವಣಾ ನೋಂದಣಿ ಅಧಿಕಾರಿಯನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಬಿಎಲ್‌ಒ ಆಲಂ ಹೇಳಿದ್ದಾರೆ.

ಚುನಾವಣಾ ಆಯೋಗ ಹನ್ನೊಂದು ಮಾನ್ಯ ದಾಖಲೆಗಳಲ್ಲಿ ಒಂದನ್ನು ಮಾತ್ರ ಬಯಸುತ್ತದೆಯಾದರೂ, ಅನೇಕರು ಮೂರು ಅಥವಾ ನಾಲ್ಕು ದಾಖಲೆಗಳನ್ನು ಸಲ್ಲಿಸಿದ್ದಾರೆ. ಆದರೂ, ಅವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹಕ್ಕು ಕಳೆದುಕೊಂಡ ಮತದಾರರಲ್ಲಿ ಒಬ್ಬರಾದ ಕಾಝಿರುಲ್ ಮಂಡಲ್ ಹೇಳಿದ್ದಾರೆ. ನಿರ್ದಿಷ್ಟ ಪಕ್ಷಪಾತದ ಬೇಡಿಕೆಗಳನ್ನು ಪೂರೈಸಲು ಆಯೋಗವು ರಾಜಕೀಯ ಪ್ರಭಾವದಿಂದ ಕಾರ್ಯನಿರ್ವಹಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಕಾನೂನು ಪರಿಹಾರಕ್ಕಾಗಿ ಈ ವಿಷಯವನ್ನು ನ್ಯಾಯಮಂಡಳಿಗೆ ಕೊಂಡೊಯ್ಯುವುದಾಗಿ ಬಿಎಲ್‌ಒ ಆಲಂ ತಿಳಿಸಿದ್ದಾರೆ.

ಬಸಿರ್ಹತ್ ಬ್ಲಾಕ್ IIರ ಅಡಿಯಲ್ಲಿ ಬರುವ ಬೇಗಂಪುರ್ ಬಿಬಿಪುರ್ ಗ್ರಾಮ ಪಂಚಾಯತ್‌ನ 5ನೇ ಸಂಖ್ಯೆಯ ಬೂತ್ ಈ ವಿವಾದದ ಕೇಂದ್ರಬಿಂದುವಾಗಿದೆ. ಇಲ್ಲಿ ಒಟ್ಟು 992 ನೋಂದಾಯಿತ ಮತದಾರರಿದ್ದಾರೆ. ಇವರಲ್ಲಿ ಸಾವು ಅಥವಾ ಸ್ಥಳಾಂತರದ ಕಾರಣದಿಂದಾಗಿ 38 ಹೆಸರುಗಳನ್ನು ಸಾಮಾನ್ಯ ನಿಯಮದಂತೆ ಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಉಳಿದಂತೆ ಒಟ್ಟು 358 ಮತದಾರರ ಅರ್ಹತೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿತ್ತು.

ಕರಡು ಪಟ್ಟಿಯಲ್ಲಿ ಈ ಪೈಕಿ 18 ಪ್ರಕರಣಗಳು ಇತ್ಯರ್ಥಗೊಂಡಿದ್ದರೂ, ಉಳಿದ 340 ಮತದಾರರ ಹೆಸರನ್ನು ಅಂತಿಮ ತೀರ್ಮಾನ ಬಾಕಿ ಇರುವ ಪಟ್ಟಿಯಲ್ಲಿ ಇರಿಸಲಾಗಿತ್ತು. ಜವನರಿ 23ರಂದು ಪೂರಕ ಪಟ್ಟಿ ಪ್ರಕಟವಾಗುವವರೆಗೂ ಇದು ಮುಂದುವರಿದಿದ್ದು, ಅಂತಿಮವಾಗಿ ಆ ಎಲ್ಲಾ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.

ಆಲಂ ಅವರು ಮಾತನಾಡಿ, ಈ ಮತದಾರರು ಅರ್ಜಿಗಳನ್ನು ಭರ್ತಿ ಮಾಡಲು ತಾವು ವೈಯಕ್ತಿಕವಾಗಿ ಸಹಾಯ ಮಾಡಿದ್ದಾಗಿ ಮತ್ತು ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡುವುದನ್ನು ಖಚಿತಪಡಿಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಆದರೂ, ಸಹ, ಆ ಹೆಸರುಗಳನ್ನು ಆಯ್ದು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...