Homeಮುಖಪುಟಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

- Advertisement -
- Advertisement -

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ ಸ್ಥಾನಕ್ಕೆ ಮಂಗಳವಾರ (ಡಿ.16) ರಾಜೀನಾಮೆ ನೀಡಿದ್ದಾರೆ. ಅದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಲು ಅನುವು ಮಾಡಿಕೊಡುವ ಸಲುವಾಗಿ ತನ್ನನ್ನು ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಅರೂಪ್ ಬಿಸ್ವಾಸ್ ಕೋರಿದ್ದರು. ಬಿಸ್ವಾಸ್ ಅವರ ಈ ನಿರ್ಧಾರವನ್ನು ಸಿಎಂ ಮಮತಾ ಬ್ಯಾನರ್ಜಿ ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ.

ತನಿಖೆ ನಿಷ್ಪಕ್ಷಪಾತವಾಗಿ ಮುಗಿಯುವವರೆಗೆ ಸಚಿವ ಸ್ಥಾನದಿಂದ ಕೆಳಗಿಳಿಯುವ ಬಿಸ್ವಾಸ್ ಅವರ ನಿರ್ಧಾರ ಸರಿಯಾಗಿದೆ. ತನಿಖೆ ಮುಗಿಯುವವರೆಗೆ ಕ್ರೀಡಾ ಇಲಾಖೆಯನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಕ್ರೀಡಾ ಇಲಾಖೆಯನ್ನು ಸಿಎಂ ಮಮತಾ ಬ್ಯಾನರ್ಜಿ ಅವರೇ ನೇರವಾಗಿ ನೋಡಿಕೊಳ್ಳುತ್ತಾರೆ. ಬಿಸ್ವಾಸ್ ಅವರು ವಿದ್ಯುತ್ ಇಲಾಖೆಯ ಸಚಿವರೂ ಹೌದು. ಆ ಹುದ್ದೆಯಲ್ಲಿ ಅವರು ಮುಂದುವರೆಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

‘ಗೋಟ್ ಇಂಡಿಯಾ ಟೂರ್ 2025’ರ ಮೊದಲ ಹಂತವಾಗಿ ಶನಿವಾರ (ಡಿ.13) ಬೆಳಿಗ್ಗೆ 11:30ರ ಸುಮಾರಿಗೆ ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣ ತಲುಪಿದ್ದರು. ಅವರೊಂದಿಗೆ ಅರ್ಜೆಂಟೀನಾ ತಂಡದ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಕೂಡ ಇದ್ದರು. ಮೆಸ್ಸಿ ಕ್ರೀಡಾಂಗಣದಲ್ಲಿ ಜನರತ್ತ ಕೈ ಬೀಸಿ, ಸಣ್ಣ ಗೌರವ ಸ್ವೀಕರಿಸಿ ಬಳಿಕ ಆಟಗಾರರು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿದ್ದರು.

ಕೇವಲ 10-20 ನಿಮಿಷಗಳಷ್ಟೇ ಇದ್ದು ಬೇಗನೇ ಹೊರಟು ಹೋಗಿದ್ದರು. ಇದರಿಂದ 4 ರಿಂದ 18 ಸಾವಿರದವರೆಗೆ ಪಾವತಿಸಿ ಟಿಕೆಟ್ ಪಡೆದಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಕಾರಣ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಬಿಗಿಯಾಗಿ ಸುತ್ತುವರಿದಿದ್ದರು.

ಇದರಿಂದ ನಿರಾಸೆಗೊಂಡ ಪ್ರೇಕ್ಷಕರು ಜೋರಾಗಿ ಕೂಗಲು ಶುರು ಮಾಡಿದ್ದರು. ನೀರಿನ ಬಾಟಲ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳನ್ನು ಮೈದಾನಕ್ಕೆ ಎಸೆದಿದ್ದರು. ಕೆಲವರು ಬ್ಯಾರಿಕೇಡ್‌ಗಳನ್ನು ಮುರಿದು ಮೈದಾನಕ್ಕೆ ನುಗ್ಗಿದ್ದರು. ಬ್ಯಾನರ್‌, ಹೋರ್ಡಿಂಗ್ಸ್, ಮತ್ತು ಕುಳಿತುಕೊಳ್ಳುವ ಕುರ್ಚಿಗಳನ್ನು ಹಾನಿಗೊಳಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗಲಾಟೆ ನಿಯಂತ್ರಿಸಿದ್ದರು.

ಸಿಎಂ ಮಮತಾ ಬ್ಯಾನರ್ಜಿ ಅವರು ಕಳಪೆ ವ್ಯವಸ್ಥೆಗೆ ಆಘಾತ ವ್ಯಕ್ತಪಡಿಸಿ, ಮೆಸ್ಸಿ ಮತ್ತು ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ (ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ) ಘೋಷಿಸಿದ್ದಾರೆ. ಈ ಸಮಿತಿ ಘಟನೆಗೆ ಕಾರಣ ತಿಳಿಸಲಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡಲಿದೆ.

ಪೊಲೀಸರು ಮುಖ್ಯ ಸಂಘಟಕ ಸತಾದ್ರು ದತ್ತ ಅವರನ್ನು ಕಳಪೆ ವ್ಯವಸ್ಥೆಗಾಗಿ ಬಂಧಿಸಿದ್ದಾರೆ. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಡಿಜಿಪಿ ರಾಜೀವ್ ಕುಮಾರ್ ಅವರು ಸಂಘಟಕರು ಟಿಕೆಟ್ ಹಣ ಮರುಪಾವತಿಗೆ ಲಿಖಿತ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲ ಸಿ.ವಿ ಆನಂದ ಬೋಸ್ ಸರ್ಕಾರದಿಂದ ವಿವರವಾದ ವರದಿ ಕೇಳಿದ್ದು, ವ್ಯವಸ್ಥೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಳಿಕ ಆಡಳಿತರೂಡ ಟಿಎಂಸಿ ಮತ್ತು ವಿಪಕ್ಷ ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...