Homeಮುಖಪುಟಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

- Advertisement -
- Advertisement -

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ ಸ್ಥಾನಕ್ಕೆ ಮಂಗಳವಾರ (ಡಿ.16) ರಾಜೀನಾಮೆ ನೀಡಿದ್ದಾರೆ. ಅದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಲು ಅನುವು ಮಾಡಿಕೊಡುವ ಸಲುವಾಗಿ ತನ್ನನ್ನು ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಅರೂಪ್ ಬಿಸ್ವಾಸ್ ಕೋರಿದ್ದರು. ಬಿಸ್ವಾಸ್ ಅವರ ಈ ನಿರ್ಧಾರವನ್ನು ಸಿಎಂ ಮಮತಾ ಬ್ಯಾನರ್ಜಿ ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ.

ತನಿಖೆ ನಿಷ್ಪಕ್ಷಪಾತವಾಗಿ ಮುಗಿಯುವವರೆಗೆ ಸಚಿವ ಸ್ಥಾನದಿಂದ ಕೆಳಗಿಳಿಯುವ ಬಿಸ್ವಾಸ್ ಅವರ ನಿರ್ಧಾರ ಸರಿಯಾಗಿದೆ. ತನಿಖೆ ಮುಗಿಯುವವರೆಗೆ ಕ್ರೀಡಾ ಇಲಾಖೆಯನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಕ್ರೀಡಾ ಇಲಾಖೆಯನ್ನು ಸಿಎಂ ಮಮತಾ ಬ್ಯಾನರ್ಜಿ ಅವರೇ ನೇರವಾಗಿ ನೋಡಿಕೊಳ್ಳುತ್ತಾರೆ. ಬಿಸ್ವಾಸ್ ಅವರು ವಿದ್ಯುತ್ ಇಲಾಖೆಯ ಸಚಿವರೂ ಹೌದು. ಆ ಹುದ್ದೆಯಲ್ಲಿ ಅವರು ಮುಂದುವರೆಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

‘ಗೋಟ್ ಇಂಡಿಯಾ ಟೂರ್ 2025’ರ ಮೊದಲ ಹಂತವಾಗಿ ಶನಿವಾರ (ಡಿ.13) ಬೆಳಿಗ್ಗೆ 11:30ರ ಸುಮಾರಿಗೆ ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣ ತಲುಪಿದ್ದರು. ಅವರೊಂದಿಗೆ ಅರ್ಜೆಂಟೀನಾ ತಂಡದ ಸಹ ಆಟಗಾರರಾದ ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಕೂಡ ಇದ್ದರು. ಮೆಸ್ಸಿ ಕ್ರೀಡಾಂಗಣದಲ್ಲಿ ಜನರತ್ತ ಕೈ ಬೀಸಿ, ಸಣ್ಣ ಗೌರವ ಸ್ವೀಕರಿಸಿ ಬಳಿಕ ಆಟಗಾರರು ಮತ್ತು ಗಣ್ಯರೊಂದಿಗೆ ಸಂವಾದ ನಡೆಸಿದ್ದರು.

ಕೇವಲ 10-20 ನಿಮಿಷಗಳಷ್ಟೇ ಇದ್ದು ಬೇಗನೇ ಹೊರಟು ಹೋಗಿದ್ದರು. ಇದರಿಂದ 4 ರಿಂದ 18 ಸಾವಿರದವರೆಗೆ ಪಾವತಿಸಿ ಟಿಕೆಟ್ ಪಡೆದಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಕಾರಣ, ರಾಜಕಾರಣಿಗಳು, ಸೆಲೆಬ್ರಿಟಿಗಳು, ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಬಿಗಿಯಾಗಿ ಸುತ್ತುವರಿದಿದ್ದರು.

ಇದರಿಂದ ನಿರಾಸೆಗೊಂಡ ಪ್ರೇಕ್ಷಕರು ಜೋರಾಗಿ ಕೂಗಲು ಶುರು ಮಾಡಿದ್ದರು. ನೀರಿನ ಬಾಟಲ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳನ್ನು ಮೈದಾನಕ್ಕೆ ಎಸೆದಿದ್ದರು. ಕೆಲವರು ಬ್ಯಾರಿಕೇಡ್‌ಗಳನ್ನು ಮುರಿದು ಮೈದಾನಕ್ಕೆ ನುಗ್ಗಿದ್ದರು. ಬ್ಯಾನರ್‌, ಹೋರ್ಡಿಂಗ್ಸ್, ಮತ್ತು ಕುಳಿತುಕೊಳ್ಳುವ ಕುರ್ಚಿಗಳನ್ನು ಹಾನಿಗೊಳಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗಲಾಟೆ ನಿಯಂತ್ರಿಸಿದ್ದರು.

ಸಿಎಂ ಮಮತಾ ಬ್ಯಾನರ್ಜಿ ಅವರು ಕಳಪೆ ವ್ಯವಸ್ಥೆಗೆ ಆಘಾತ ವ್ಯಕ್ತಪಡಿಸಿ, ಮೆಸ್ಸಿ ಮತ್ತು ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ (ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ) ಘೋಷಿಸಿದ್ದಾರೆ. ಈ ಸಮಿತಿ ಘಟನೆಗೆ ಕಾರಣ ತಿಳಿಸಲಿದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡಲಿದೆ.

ಪೊಲೀಸರು ಮುಖ್ಯ ಸಂಘಟಕ ಸತಾದ್ರು ದತ್ತ ಅವರನ್ನು ಕಳಪೆ ವ್ಯವಸ್ಥೆಗಾಗಿ ಬಂಧಿಸಿದ್ದಾರೆ. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಡಿಜಿಪಿ ರಾಜೀವ್ ಕುಮಾರ್ ಅವರು ಸಂಘಟಕರು ಟಿಕೆಟ್ ಹಣ ಮರುಪಾವತಿಗೆ ಲಿಖಿತ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯಪಾಲ ಸಿ.ವಿ ಆನಂದ ಬೋಸ್ ಸರ್ಕಾರದಿಂದ ವಿವರವಾದ ವರದಿ ಕೇಳಿದ್ದು, ವ್ಯವಸ್ಥೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಳಿಕ ಆಡಳಿತರೂಡ ಟಿಎಂಸಿ ಮತ್ತು ವಿಪಕ್ಷ ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...