Homeಮುಖಪುಟಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

ಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

- Advertisement -
- Advertisement -

ಭಾನುವಾರ ಸಂಜೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ನೆರೆಯ ಹೌರಾ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ ಈ ಘರ್ಷಣೆಗಳು ನಡೆದಿವೆ.

ಈ ಮೆರವಣಿಗೆಯ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸ್ಥಳದಲ್ಲಿ ಉದ್ವಿಘ್ನತೆ ಉಂಟಾಯಿತು. ಇದರಲ್ಲಿ ಹಲವಾರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಆನಂತರ ಅಧಿಕಾರಿಗಳು ಹೂಗ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಿದ್ದಾರೆ.

ನಗರದ ರಿಶ್ರಾ ಪ್ರದೇಶದಲ್ಲಿ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಘರ್ಷಣೆ ನಡೆದಿದೆ. ಈ ಪ್ರದೇಶದಲ್ಲಿ ಎರಡು ರಾಮನವಮಿ ಮೆರವಣಿಗೆಗಳನ್ನು ಆಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಮೆರವಣಿಗೆಯಲ್ಲಿ ಬಿಜೆಪಿ ನಾಯಕರೂ ಭಾಗಿಯಾಗಿದ್ದರು. ”ಮೇದಿನಿಪುರ ಸಂಸದ ದಿಲೀಪ್ ಘೋಷ್ ಮತ್ತು ದಾಳಿಗೊಳಗಾದ ಪುರ್ಸುರಾ ಶಾಸಕ ಬಿಮನ್ ಘೋಷ್ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು” ಎಂದು ಚಂದನನಗರ ಪೊಲೀಸ್ ಕಮಿಷನರೇಟ್‌ನ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

”ಈ ಮೆರವಣಿಗೆ ಸಾಂಪ್ರದಾಯಿಕ ಮಾರ್ಗದಲ್ಲಿ ಹೋಗುತ್ತಿದ್ದಾಗ ಒಂದು ಗುಂಪು ಅದರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿತು. ಪರಿಸ್ಥಿತಿ ಹತೋಟೆಗೆ ತಗೆದುಕೊಳ್ಳಲು ನಾವು ತಕ್ಷಣದಲ್ಲೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಅವರು ಹೇಳಿದರು.

ಹಿಂಸಾಚಾರದಲ್ಲಿ ಬಿಮನ್ ಘೋಷ್ ಗಾಯಗೊಂಡಿದ್ದಾರೆ. ”ಕಲ್ಲು ಎಸೆದವರನ್ನು ಓಡಿಸುವ ಮುನ್ನ ಪೊಲೀಸರು ಸ್ವಲ್ಪ ಹೊತ್ತು ಮೂಕ ಪ್ರೇಕ್ಷಕರಾಗಿದ್ದರು” ಎಂದು ಘೋಷ್ ಆರೋಪಿಸಿದ್ದಾರೆ.

ಹಿಂಸಾಚಾರ ನಡೆದ ಬಳಿಕ ರಿಶ್ರಾದ 1-5 ವಾರ್ಡ್‌ ಮತ್ತು ಸೆರಾಂಪೋರ್‌ನ 24ರ ವಾರ್ಡ್‌ಗಳಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆಯವರೆಗೆ ರಿಶ್ರಾ ಮತ್ತು ಸೆರಾಂಪೋರ್‌ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಜಾಯ್‌ಪ್ರಕಾಶ್ ಮಜುಂದಾರ್, ”ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಲಾಭಕ್ಕಾಗಿ ಗಲಭೆಗಳನ್ನು ಸೃಷ್ಟಿಸಿ, ರಾಜ್ಯದಲ್ಲಿ ಅಸ್ಥಿರತೆ ಉಂಟುಮಾಡಲು ಬಯಸಿದೆ” ಎಂದು ಆರೋಪಿಸಿದ್ದಾರೆ.

”ಪವಿತ್ರ ರಂಜಾನ್ ತಿಂಗಳಲ್ಲಿ ರಾಮನವಮಿ ಮೆರವಣಿಗೆಗಳನ್ನು ಕೈಗೊಳ್ಳಲು ಅವರು ಏಕೆ ಒಲವು ತೋರುತ್ತಿದ್ದಾರೆ? ರಾಮ ನವಮಿ ಮುಗಿದು ಎರಡು ದಿನಗಳ ನಂತರ ಏಕೆ ರ್ಯಾಲಿಯನ್ನು ನಡೆಸಲಾಯಿತು?” ಎಂದು ಅವರು ಕೇಳಿದರು.

”ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ತರಲು ಬಿಜೆಪಿ ಇಂತಹ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ” ಎಂದು ಮಜುಂದಾರ್ ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...