Homeಮುಖಪುಟಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

- Advertisement -
- Advertisement -

ಪಶ್ಚಿಮ ಬಂಗಾಳದ ಕೋಲ್ಕತ್ತಾಕ್ಕೆ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಕೆಲ ಗಂಟೆಗಳ ಮೊದಲು ಬಿಜೆಪಿ ಯುವ ಮುಖಂಡರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಸಾವಿನ ಹಿಂದೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆಯನ್ನು ಖಂಡಿಸಿರುವ ಅಮಿತ್ ಶಾ, “ಇಂದು ಬಿಜೆಪಿ ನಾಯಕ ಅರ್ಜುನ್ ಚೌರಾಸಿಯಾ ಅವರನ್ನು ರಾಜಕೀಯ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ತೃಣಮೂಲ ಸರ್ಕಾರ ನಿನ್ನೆಯಷ್ಟೇ ಬಂಗಾಳದಲ್ಲಿ ಒಂದು ವರ್ಷ ಪೂರೈಸಿದೆ. ಇದಾದ ಎರಡನೆ ದಿನದಲ್ಲಿ ರಾಜ್ಯದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ, ರಾಜಕೀಯ ಕೊಲೆಗಳ ವ್ಯವಸ್ಥೆ ಆರಂಭವಾಗಿದೆ. ಪಶ್ಚಿಮ ಬಂಗಾಳದಲ್ಲಿ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್‌ ಮಾಡುತ್ತಿರುವ ಅನೇಕ ಉದಾಹರಣೆಗಳನ್ನು ನೋಡಿದ್ದೇವೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾ ಅವರು ಬುಧವಾರ ಮಧ್ಯಾಹ್ನ ಮೃತ ವ್ಯಕ್ತಿಯ ಸಂಬಂಧಿಕರನ್ನು ಭೇಟಿಯಾದರು. “ಚೌರಾಸಿಯಾ ಅವರ ಅಜ್ಜಿ ಸೇರಿದಂತೆ ಅವರ ಕುಟುಂಬವನ್ನು ಪೊಲೀಸರು ಥಳಿಸಿದ್ದಾರೆ. ನಂತರ ಚೌರಾಸಿಯ ಸಾವನ್ನಪ್ಪಿದ್ದಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಚೌರಾಸಿಯಾ ಹಂತಕರಿಗೆ ಕಠಿಣ ಶಿಕ್ಷೆಯಾಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಬಿಜೆಪಿ ಇದರ ವಿರುದ್ಧ ಮಾತ್ರ ಹೋರಾಡುತ್ತಿದೆ. ಬಂಗಾಳದಲ್ಲಿ, ವಿರೋಧ ಪಕ್ಷದ ನಾಯಕರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಮೊದಲು ಕಮ್ಯುನಿಸ್ಟ್ ಸರ್ಕಾರದ ಅಡಿಯಲ್ಲಿ, ಈಗ ಟಿಎಂಸಿ ಸರ್ಕಾರದಿಂದ ಈ ಕೃತ್ಯ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ವಿಷಯದ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಿರುವುದನ್ನು ಪುನರುಚ್ಚರಿಸಿದ ಶಾ, ಸಾವಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿಯನ್ನು ಕೇಳಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಮೋದಿ ಸುಳ್ಳು ಹೇಳುತ್ತಾರೆ, ಆದರೆ ವಿಜ್ಞಾನವಲ್ಲ: ಕೋವಿಡ್ ಸಾವುಗಳ ಕುರಿತು ರಾಹುಲ್ ಹೇಳಿಕೆ

ಬಿಜೆಪಿ ಯುವ ಮೋರ್ಚಾ ಮುಖಂಡ ಅರ್ಜುನ್ ಚೌರಾಸಿಯಾ (27) ಅವರು ಶುಕ್ರವಾರ ಬೆಳಗ್ಗೆ ಘೋಷ್ ಬಗಾನ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅರ್ಜುನ್ ಬಿಜೆವೈಎಂ ಮಂಡಲ್ ಉಪಾಧ್ಯಕ್ಷರಾಗಿದ್ದರು.

ಅಮಿತ್ ಶಾ ಅವರನ್ನು ಕೋಲ್ಕತ್ತಾಕ್ಕೆ ಸ್ವಾಗತಿಸಲು ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಚೌರಾಸಿಯಾ ಅವರ ಸಾವಿನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಶವವನ್ನು ಹೊರತೆಗೆಯದಂತೆ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆದಿದ್ದರಿಂದ 5 ಗಂಟೆಗಳ ನಂತರ ಮೃತರ ಶವವನ್ನು ಸ್ಥಳದಿಂದ ಹೊರತೆಗೆಯಲಾಯಿತು. ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ವೈದ್ಯರು ಹಾಜರಾಗುವವರೆಗೆ ತನ್ನ ಮಗನ ಮರಣೋತ್ತರ ಪರೀಕ್ಷೆಯನ್ನು ನಡೆಸಬಾರದು ಎಂದು ಚೌರಾಸಿಯಾ ಅವರ ತಾಯಿ ಕಲ್ಕತ್ತಾ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ನಗರದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ಬಿಜೆಪಿ ಮತ್ತು ಟಿಎಂಸಿ ಎರಡೂ ಸದಸ್ಯರು ಚೌರಾಸಿಯಾ ಅವರ ಮನೆಯ ಹೊರಗೆ ಜಮಾಯಿಸಿದ್ದರು.

ಬಿಜೆಪಿ ಆರೋಪಕ್ಕೆ ಟಿಎಂಸಿ ಪ್ರತಿಕ್ರಿಯೆ

ಕೊಲೆಯಲ್ಲಿ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಟಿಎಂಸಿ ಅಲ್ಲಗಳೆದಿದೆ. “ನಮ್ಮ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಲಿ” ಎಂದು ಪಕ್ಷದ ಸಂಸದ ಸಂತಾನು ಸೇನ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Since 50 years the murder politics is going on During TMC rule it’s less. But earlier Congress now BJP are not giving com co operation and playing dirty politics.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...